ಮಂಡ್ಯ

ಸಂವಿಧಾನ ಉಳಿಸುವ ಜವಾಬ್ದಾರಿ ಯುವಕರದ್ದು: ನ್ಯಾ.ನಾಗಮೋಹನ್‌ ದಾಸ್‌

ಮಂಡ್ಯ: ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಹೇಳಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂವಿಧಾನ ಓದು ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ಸಂವಿಧಾನವು ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದೆ. ಸಮಸಮಾಜ ನಿರ್ಮಾಣ ಕುರಿತು ರಚನೆಯಾದ ಸಂವಿಧಾನ  ಅನೇಕರಿಗೆ  ಅದರ ಮೂಲ ತತ್ವಗಳ ಬಗ್ಗೆ ತಿಳಿದೇ ಇಲ್ಲ ಎಂಬುದು ವಿಷಾದನೀಯ ಎಂದರು.

ಸಂವಿಧಾನದ ಬಗ್ಗೆ ಎಲ್ಲರೂ ತಿಳಿಯಬೇಕು ಎಂಬ ಉದ್ದೇಶದಿಂದ 2018 ರಲ್ಲಿ  ‘ಸಂವಿಧಾನ ಓದು’ ಎಂಬ ಪುಸ್ತಕ ರಚಿಸಿದ್ದೆ. ಕಳೆದ 6 ವರ್ಷದಲ್ಲಿ ಸಂವಿಧಾನ ಕುರಿತು 2000 ಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದೇನೆ. ಇಷ್ಟಾದರೂ ರಾಜ್ಯದ ಒಂದಿಷ್ಟು ಜನರನ್ನು ತಲುಪಲು ನಾವು ವಿಫಲರಾಗಿದ್ದೇವೆ ಎಂದು ಬೇಸರಿಸಿದರು.

ಜಿಲ್ಲೆಯ ಯುವ ಜನರಿಗೆ ಸಂವಿಧಾನದ ಮಹತ್ವ ಮೂಲ ತತ್ವಗಳನ್ನು ತಿಳಿಸುವುದೇ ಈ ಶಿಬಿರದಲ್ಲಿ ಮೂಲ ಉದ್ದೇಶ. ಜೊತೆಗೆ ನಾವು ಅಭಿವೃದ್ಧಿಯತ್ತ ಸಾಗಲು ಇರುವ ಒಂದೇ ದಾರಿ ಎಂದರೆ ಅದು ನಮ್ಮ ಸಂವಿಧಾನ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್  ಮಾತನಾಡಿ, ನಾನು ಯು.ಪಿ.ಎಸ್.ಸಿ. ಪರೀಕ್ಷೆ ಬರೆಯುವ ಸಮಯದಲ್ಲಿ ಮೊಟ್ಟ ಮೊದಲು ನಾನು ಓದಿದ್ದು ಸಂವಿಧಾನದ ಪುಸ್ತಕ. ಮೊದಲು ಓದುವಾಗ ಕಾನೂನಿನ ಭಾಷೆ ಅರ್ಥ ಮಾಡಿಕೊಳ್ಳಲು ಕಷ್ಟವಾಯಿತು, ಆದರೆ ಅದನ್ನು ಅರ್ಥ ಮಾಡಿಕೊಂಡಾಗ ಸಮಾಜದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂಬ ಸಂಗತಿಯನ್ನು ಅರಿತುಕೊಂಡೆ ಎಂದರು.

ನಮಗೆ ಕಷ್ಟ ಬಂದಾಗ ಯಾರೂ ನಮ್ಮ ಜೊತೆ ನಿಲ್ಲುವುದಿಲ್ಲ, ನಮ್ಮ ಬದುಕಿನ ಹೋರಾಟವನ್ನು ನಾವೇ ಮಾಡಬೇಕು ಅದು ಜೀವನದ ತತ್ವ, ನಮ್ಮನ್ನು ಹೊರತು ಪಡಿಸಿ ನಮ್ಮನ್ನು ಕಾಪಾಡುವ ಶಕ್ತಿ ಯಾರಿಗಾದರೂ ಇದೆ ಎಂದರೆ ಅದು ಕೇವಲ ಭಾರತೀಯ ಸಂವಿಧಾನಕ್ಕೆ ಮಾತ್ರ ಎಂದು ಹೇಳಿದರು.

ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾಧು, ನಗರಸಭೆ ಮಾಜಿ ಅಧ್ಯಕ್ಷ ಸಿದ್ಧರಾಜು, ಮಹಿಳಾ ರೈತ ಮುಖಂಡರಾದ ಸುನಂದ ಜೈರಾಮ್, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಕೃಷ್ಣ.ಆರ್, ಕಾರ್ಮಿಕ ಮುಖಂಡರಾದ ಸಿ.ಕುಮಾರಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago