ಮಂಡ್ಯ

ರಾಜ್ಯದಲ್ಲಿ ಇರೋದು ಬಡವರ ವಿರೋಧಿ ಸರ್ಕಾರ: ಬಿ.ವೈ.ವಿಜಯೇಂದ್ರ ಆಕ್ರೋಶ

ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಭೀಕರ ಬರ ಪರಿಸ್ಥಿತಿ ಎದುರಾಗುತ್ತೆ. ಆದ್ದರಿಂದ ರಾಜ್ಯ ಬಜೆಟ್‌ ರೈತರ ಪರ ಇರಲಿ ಎಂದು ಆಗ್ರಹಿಸಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ರೈತರ ಬೆಳೆಗೆ ಬೆಂಬಲ ಬೆಲೆ ಕೊಟ್ಟಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಹೆಸರು ಹೇಳಿಕೊಂಡು ಮತ್ತೊಂದು ಕಡೆ ಕಿತ್ತುಕೊಳ್ತಿದ್ದಾರೆ. ರಾಜ್ಯದಲ್ಲಿ ಬಡವರ ವಿರೋಧಿ ಸರ್ಕಾರ ಇದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಇದು ರೈತ ವಿರೋಧಿ ಹಾಗೂ ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ. SC/ST ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಚಲುವರಾಯಸ್ವಾಮಿ ಮಂತ್ರಿ ಇದ್ದಾರೆ. ಅವರಿಗೆ ತಾಕತ್ ಇದ್ರೆ ಇನ್ನು ಏನಾದರೂ ಈ ಭಾಗಕ್ಕೆ ತರಲಿ. ಉತ್ತರ ಕರ್ನಾಟಕಕ್ಕೆ ಕೊಟ್ಟ ವಿವಿಯನ್ನು ಕಿತ್ತು ಇಲ್ಲಿಗೆ ತರುವ ಅವಶ್ಯಕತೆ ಇಲ್ಲ. ಮತ್ತೊಂದು ವಿವಿ ಮಾಡಲಿ. ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಕೃಷಿ ವಿವಿ ಜೊತೆಗೆ ತೋಟಗಾರಿಕೆ ವಿವಿ ತರುವ ಕುತಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಡಿಕೆಶಿ ಅವರಿಗೆ ವಿನಮ್ರವಾಗಿ ಹೇಳುತ್ತೇನೆ. ಅಧಿಕಾರ ಶಾಶ್ವತ ಅಲ್ಲ, ಯಾರು ನಿಮ್ಮ ಗುಲಾಮರಲ್ಲ. ಅಧಿಕಾರ ಶಾಶ್ವತ ಎನ್ನುವ ವರ್ತನೆ ಸರಿಯಲ್ಲ. ಭಂಡತನ ಬಿಟ್ಟು ತಪ್ಪಿಗೆ ಕ್ಷಮೆಯಾಚಿಸಿ ಎಂದು ಆಗ್ರಹಿಸಿದರು.

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

10 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

11 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

11 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago