ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಭೀಕರ ಬರ ಪರಿಸ್ಥಿತಿ ಎದುರಾಗುತ್ತೆ. ಆದ್ದರಿಂದ ರಾಜ್ಯ ಬಜೆಟ್ ರೈತರ ಪರ ಇರಲಿ ಎಂದು ಆಗ್ರಹಿಸಿದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ರೈತರ ಬೆಳೆಗೆ ಬೆಂಬಲ ಬೆಲೆ ಕೊಟ್ಟಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರು ಹೇಳಿಕೊಂಡು ಮತ್ತೊಂದು ಕಡೆ ಕಿತ್ತುಕೊಳ್ತಿದ್ದಾರೆ. ರಾಜ್ಯದಲ್ಲಿ ಬಡವರ ವಿರೋಧಿ ಸರ್ಕಾರ ಇದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಇದು ರೈತ ವಿರೋಧಿ ಹಾಗೂ ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ. SC/ST ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಚಲುವರಾಯಸ್ವಾಮಿ ಮಂತ್ರಿ ಇದ್ದಾರೆ. ಅವರಿಗೆ ತಾಕತ್ ಇದ್ರೆ ಇನ್ನು ಏನಾದರೂ ಈ ಭಾಗಕ್ಕೆ ತರಲಿ. ಉತ್ತರ ಕರ್ನಾಟಕಕ್ಕೆ ಕೊಟ್ಟ ವಿವಿಯನ್ನು ಕಿತ್ತು ಇಲ್ಲಿಗೆ ತರುವ ಅವಶ್ಯಕತೆ ಇಲ್ಲ. ಮತ್ತೊಂದು ವಿವಿ ಮಾಡಲಿ. ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಕೃಷಿ ವಿವಿ ಜೊತೆಗೆ ತೋಟಗಾರಿಕೆ ವಿವಿ ತರುವ ಕುತಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಡಿಕೆಶಿ ಅವರಿಗೆ ವಿನಮ್ರವಾಗಿ ಹೇಳುತ್ತೇನೆ. ಅಧಿಕಾರ ಶಾಶ್ವತ ಅಲ್ಲ, ಯಾರು ನಿಮ್ಮ ಗುಲಾಮರಲ್ಲ. ಅಧಿಕಾರ ಶಾಶ್ವತ ಎನ್ನುವ ವರ್ತನೆ ಸರಿಯಲ್ಲ. ಭಂಡತನ ಬಿಟ್ಟು ತಪ್ಪಿಗೆ ಕ್ಷಮೆಯಾಚಿಸಿ ಎಂದು ಆಗ್ರಹಿಸಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…