ಮಂಡ್ಯ

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಸಂದೇಶ ಕೊಟ್ಟಿದ್ದಾರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ.

ರಾಜ್ಯ ರಾಜಕಾರಣಕ್ಕೆ ವಾಪಸ್ ಬರುತ್ತೀರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು, ರಾಜ್ಯವೇ ನನ್ನ ಪರಿಮಿತಿ. ಜನರು ಅಪೇಕ್ಷೆ ಮಾಡಿದ ಕಡೆ ಸ್ಪರ್ಧೆ ಮಾಡ್ತೇನೆ. ಮಂಡ್ಯದಿಂದ ಲೋಕಸಭೆ ಚುನಾವಣೆಗೆ ನಿಲ್ಲುವ ಉದ್ದೇಶ ಇರಲಿಲ್ಲ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ನಿಲ್ಲಿಸಬೇಕು ಎಂದುಕೊಂಡಿದ್ದೆ. ಅವತ್ತು ಅನಿವಾರ್ಯವಾಗಿ ನಾನು ಚುನಾವಣೆಗೆ ನಿಂತೆ. ಕೇಂದ್ರ ಮಂತ್ರಿ ಆಗ್ತೀನಿ ಎಂದು ನನಗೆ ಗೊತ್ತಿರಲಿಲ್ಲ ಎಂದರು.

ನಮ್ಮ ಪಕ್ಷದಿಂದ ಬೇರೆ ಪಕ್ಷಕ್ಕೆ ಹೋದವರು ಜಾ.ದಳದ ಕಥೆ ಮುಗಿಯಿತು ಎಂದರು. ಆದರೆ, ನಮ್ಮ ಪಕ್ಷ ಯಾವ ರೀತಿಯಲ್ಲಿ ಗಟ್ಟಿಯಾಗುತ್ತಿದೆ ಎನ್ನುವುದು ಅವರಿಗೆ ಗೊತ್ತಿಲ್ಲ. ಕೆಲವರಿಗೆ ಜಾ.ದಳ ಪಕ್ಷದ್ದೇ ಯೋಚನೆ. ಜಾ.ದಳ ಮುಗಿಸಬೇಕು ಎಂಬುದೇ ಅವರ ಚಿಂತೆ ಎಂದು ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಲೇವಡಿ ಮಾಡಿದರು.

ಕೇಂದ್ರದೊಂದಿಗೆ ರಾಜ್ಯ ಸರ್ಕಾರ ವಿಶ್ವಾಸದಲ್ಲಿಲ್ಲ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವಾರು ಅಕ್ರಮಗಳು ನಡೆದಿವೆ. ಕಾನೂನು ಬಾಹಿರ ನಿರ್ಧಾರಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳುವ ಅವಕಾಶ ಇದ್ದರೂ ರಾಜ್ಯಪಾಲರು ಬೇರೆ ರಾಜ್ಯಗಳ ರಾಜ್ಯಪಾಲರ ರೀತಿ ನಮ್ಮ ಸರ್ಕಾರದ ಜತೆ ಸಂಘರ್ಷ ಮಾಡಲಿಲ್ಲ. ಅದನ್ನು ಈ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಕೇಂದ್ರ ಸರ್ಕಾರದ ಜತೆ ರಾಜ್ಯ ಸರ್ಕಾರ ವಿಶ್ವಾಸದಲ್ಲಿಲ್ಲ. ಕೇಂದ್ರದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಪಾರದರ್ಶಕವಾಗಿ ಮಾಡಿಕೊಂಡಿಲ್ಲ. ಇವರ ತಪ್ಪಿನಿಂದ ಕೆಲ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ವಾಪಸ್ ಹೋಗಿವೆ. ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

8 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

14 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago