ಮಂಡ್ಯ

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ಸಂದೇಶ ಕೊಟ್ಟಿದ್ದಾರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ.

ರಾಜ್ಯ ರಾಜಕಾರಣಕ್ಕೆ ವಾಪಸ್ ಬರುತ್ತೀರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು, ರಾಜ್ಯವೇ ನನ್ನ ಪರಿಮಿತಿ. ಜನರು ಅಪೇಕ್ಷೆ ಮಾಡಿದ ಕಡೆ ಸ್ಪರ್ಧೆ ಮಾಡ್ತೇನೆ. ಮಂಡ್ಯದಿಂದ ಲೋಕಸಭೆ ಚುನಾವಣೆಗೆ ನಿಲ್ಲುವ ಉದ್ದೇಶ ಇರಲಿಲ್ಲ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ನಿಲ್ಲಿಸಬೇಕು ಎಂದುಕೊಂಡಿದ್ದೆ. ಅವತ್ತು ಅನಿವಾರ್ಯವಾಗಿ ನಾನು ಚುನಾವಣೆಗೆ ನಿಂತೆ. ಕೇಂದ್ರ ಮಂತ್ರಿ ಆಗ್ತೀನಿ ಎಂದು ನನಗೆ ಗೊತ್ತಿರಲಿಲ್ಲ ಎಂದರು.

ನಮ್ಮ ಪಕ್ಷದಿಂದ ಬೇರೆ ಪಕ್ಷಕ್ಕೆ ಹೋದವರು ಜಾ.ದಳದ ಕಥೆ ಮುಗಿಯಿತು ಎಂದರು. ಆದರೆ, ನಮ್ಮ ಪಕ್ಷ ಯಾವ ರೀತಿಯಲ್ಲಿ ಗಟ್ಟಿಯಾಗುತ್ತಿದೆ ಎನ್ನುವುದು ಅವರಿಗೆ ಗೊತ್ತಿಲ್ಲ. ಕೆಲವರಿಗೆ ಜಾ.ದಳ ಪಕ್ಷದ್ದೇ ಯೋಚನೆ. ಜಾ.ದಳ ಮುಗಿಸಬೇಕು ಎಂಬುದೇ ಅವರ ಚಿಂತೆ ಎಂದು ಪರೋಕ್ಷವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಲೇವಡಿ ಮಾಡಿದರು.

ಕೇಂದ್ರದೊಂದಿಗೆ ರಾಜ್ಯ ಸರ್ಕಾರ ವಿಶ್ವಾಸದಲ್ಲಿಲ್ಲ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಲವಾರು ಅಕ್ರಮಗಳು ನಡೆದಿವೆ. ಕಾನೂನು ಬಾಹಿರ ನಿರ್ಧಾರಗಳ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳುವ ಅವಕಾಶ ಇದ್ದರೂ ರಾಜ್ಯಪಾಲರು ಬೇರೆ ರಾಜ್ಯಗಳ ರಾಜ್ಯಪಾಲರ ರೀತಿ ನಮ್ಮ ಸರ್ಕಾರದ ಜತೆ ಸಂಘರ್ಷ ಮಾಡಲಿಲ್ಲ. ಅದನ್ನು ಈ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಕೇಂದ್ರ ಸರ್ಕಾರದ ಜತೆ ರಾಜ್ಯ ಸರ್ಕಾರ ವಿಶ್ವಾಸದಲ್ಲಿಲ್ಲ. ಕೇಂದ್ರದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಪಾರದರ್ಶಕವಾಗಿ ಮಾಡಿಕೊಂಡಿಲ್ಲ. ಇವರ ತಪ್ಪಿನಿಂದ ಕೆಲ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ವಾಪಸ್ ಹೋಗಿವೆ. ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

10 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

11 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

11 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

16 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

17 hours ago