ಮಂಡ್ಯ

ಅಂದು ಸ್ಟಾರ್ ಬಾಲನಟಿ ಇಂದು ಐಎಎಸ್ ಅಧಿಕಾರಿ

ಅಂದು ಸ್ಟಾರ್ ಬಾಲನಟಿ ಇಂದು ಐಎಎಸ್ ಅಧಿಕಾರಿ

ಮಂಡ್ಯದ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ಸಾಧನೆ

ಮಂಡ್ಯ: 4ನೇ ವಯಸ್ಸಿನಿಂದಲೇ ಸ್ಟಾರ್ ಬಾಲನಟಿಯಾಗಿ ಸಿನಿಮಾರಂಗದಲ್ಲಿ ಮಿಂಚಿದ ಎಚ್.ಎಸ್.ಕೀರ್ತನಾ ಇಂದು ಐ ಎ ಎಸ್ ಅಧಿಕಾರಿಯಾಗಿ ಮಂಡ್ಯದ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ನಡೆಸಿರುವುದು ಯುವಜನರಿಗೆ ಹೆಮ್ಮೆಯ ಸಂಗತಿ. ಸ್ಫೂರ್ತಿಯ ಚಿಲುಮೆಯಂತೆ ಚಿತ್ರರಂಗದ ಬಾಲನಟಿಯಾಗಿ ನಟಿಸಿದ್ದ ಎಚ್.ಎಸ್.ಕೀರ್ತನಾ ಅವರು ದೊರೆ, ಗಂಗಾ ಯಮುನಾ, ಕರ್ಪೂರದ ಗೊಂಬೆ, ಮುದ್ದಿನ ಅಳಿಯ, ಉಪೇಂದ್ರ, ಎ, ಹಬ್ಬ,  ಲೇಡಿ ಕಮಿಷನರ್, ಸರ್ಕಲ್ ಇನ್‌ಸ್ಪೆಕ್ಟರ್ ಸೇರಿದಂತೆ ವಿಷ್ಣುವರ್ಧನ್, ಶಿವರಾಜ್‌ಕುವಾರ್, ಅಂಬರೀಶ್, ರಮೇಶ್, ಶಶಿಕುವಾರ್, ದೊಡ್ಡಣ್ಣ ಸೇರಿದಂತೆ ಎಲ್ಲ ಸ್ಟಾರ್ ನಟರೊಂದಿಗೆ ಸುವಾರು 32 ಚಿತ್ರಗಳಲ್ಲಿ ನಟಿಸಿದ್ದಾರೆ. ಮಾತ್ರವಲ್ಲ ಚಿಗುರು, ಜನನಿ, ಪುಟಾಣಿ ಏಜೆಂಟ್ ಸೇರಿದಂತೆ 48 ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಅತ್ಯುತ್ತಮ ಬಾಲನಟಿ ಪ್ರಶಸ್ತಿಯೊಂದಿಗೆ  2004 ರಲ್ಲಿ ರಾಷ್ಟ್ರೀಯ ಬಾಲ ಪುರಸ್ಕಾರ ಪಡೆದಿದ್ದ ಕೀರ್ತನಾ 2020 ರಲ್ಲಿ ಯೂನಿಯನ್‌ ಪಬ್ಲಿಕ್ ಸರ್ವಿಸ್ ಕಮಿಷನ್(ಯುಪಿಎಸ್‌ಸಿ) ಪರೀಕ್ಷೆಯಲ್ಲಿ   ಸರ್ಕಾರದ ಪ್ರಮುಖ ಹುದ್ದೆಗೇರಿದರು.

ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸಿ, ಬಳಿಕ ತಹಸಿಲ್ದಾರರಾಗಿಯೂ ಸೇವೆ ಆರಂಭಿಸಿದ ಕೀರ್ತನಾ ಅವರು ಇಂದು ಮಡಿವಾಳ ಜನಾಂಗದಲ್ಲಿ ನೇರವಾಗಿ ಐಎಎಸ್ ಅಧಿಕಾರಿಯಾಗಿರುವುದು ಮಾದರಿಯಾದದ್ದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ನಟ ನಿರ್ದೇಶಕ ಗಿರೀಶ್ ಕಾರ್ನಾಡ್ ಹಾಗೂ ಜಿ.ವಿ.ಐಯ್ಯರ್‌  ಅವರೊಂದಿಗೆ ಸಿನಿ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಗಳಿಸಿದ್ದು, ಒಂದು ಮರೆಯಲಾರದ ಅನುಭವವೂ ಹೌದು ಎನ್ನುವ ಕೀರ್ತನಾ ಹಿಂದುಳಿದ ವರ್ಗಗಳಿಗೆ ಸೇರಿದ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಓರ್ವ ಹೆಣ್ಣಾಗಿ ನನ್ನಲ್ಲಿ ಒಂದಷ್ಟು ಗುರಿ ಹಾಗೂ ಉದ್ದೇಶಗಳಿವೆ. ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಅರ್ಹ ಬಡಜನರಿಗೆ ತಲುಪಿಸುವುದು, ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡುವುದು ಹಾಗೂ ಕೌಶಲ್ಯಾಭಿವೃದ್ಧಿ, ಮಕ್ಕಳ ಅಭಿವೃದ್ಧಿಗೆ ಆದ್ಯ ಗಮನ ನೀಡುವುದು ನನ್ನ ಆದ್ಯತೆಗಳಾಗಿವೆ. ಸಾಹಿತ್ಯ, ಸಂಸ್ಕೃತಿ ಕ್ಷೇತ್ರಗಳಲ್ಲೂ ಕೆಲಸ ಮಾಡುವ ಉತ್ಸಾಹವಿದೆ ಎನ್ನುತ್ತಾರೆ ಎಚ್.ಎಸ್.ಕೀರ್ತನಾ.

ನನ್ನದು 6ನೇ ಪ್ರಯತ್ನ

ಮೊದಲಿಂದಲೂ ನನ್ನ ಸಾಮರ್ಥ್ಯದ ಬಗ್ಗೆ ನನ್ನಲ್ಲಿ ವಿಶ್ವಾಸವಿತ್ತು. ನಾನು ಚಿತ್ರರಂಗದಲ್ಲಿ ಬಾಲನಟಿಯಾಗಿ ರಾಜ್ಯದ ಜನರ ಪ್ರೀತಿಯನ್ನು ಗಳಿಸಿದ್ದೆ. ಆದರೆ ಸಹಜವಾಗಿ ನಮ್ಮ ತಂದೆ ಶ್ರೀನಿವಾಸ್ ಅವರು ಇನ್ನು ಚಿತ್ರರಂಗ ಸಾಕು, ಓದಿನತ್ತ ಮುಖ ಮಾಡು ಏನಾದರೂ ಸಾಧನೆ ಮಾಡು ಎಂದು ಪ್ರೋತ್ಸಾಹಿಸಿದರು. ಅದರಂತೆ ನಿರಂತರ ಶ್ರಮ ಹಾಕಿದೆ. ಅದರ ಫಲವೇ ಇಂದು ಐಎಎಸ್ ಅಧಿಕಾರಿಯಾಗಿದ್ದೇನೆ. ನನಗೆ ಸಿಕ್ಕಿರುವ ಈ ಹುದ್ದೆಯನ್ನು ಶ್ರೀಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಲು ಹಾಗೂ ಕರ್ತವ್ಯದಲ್ಲಿ ಲೋಪಬಾರದ ರೀತಿ ಕಾರ್ಯನಿರ್ವಹಿಸುವುದು ನನ್ನ ಆದ್ಯತೆಯಾಗಿದೆ.

 

-ಎಚ್.ಎಸ್.ಕೀರ್ತನಾ, ಉಪ ವಿಭಾಗಾಧಿಕಾರಿಗಳು, ಮಂಡ್ಯ

andolana

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

9 mins ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

1 hour ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

7 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

7 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

7 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

7 hours ago