ಮಂಡ್ಯ

ಕಳ್ಳತನ ಹಾಗೂ ವೃದ್ಧನ ಕೊಲೆ ಪ್ರಕರಣ : ಐವರು ಆರೋಪಿಗಳ ಬಂಧನ

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು

ಮಂಡ್ಯ : ಕಳ್ಳತನ ಹಾಗು ವೃದ್ಧನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಐವರನ್ನು ಬಂಧಿಸಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಮಂಡ್ಯ ತಾಲ್ಲೂಕಿನ ಈಚಗೆರೆ ಗ್ರಾಮದ ಕಿರಣ್ (೨೪), ಕೊತ್ತತ್ತಿ ಗ್ರಾಮದ ಆನಂದ್, ಶರತ್, ಶ್ರೀನಿವಾಸ, ಕೃಷ್ಣಾಚಾರಿ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಮಳವಳ್ಳಿ ತಾಲ್ಲೂಕು ಭೀಮನಹಳ್ಳಿ ಗ್ರಾಮದಲ್ಲಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ವೃತ್ತ ನಿರೀಕ್ಷಕ ಶ್ರೀಧರ್ ಹಾಗೂ ಸಿಬ್ಬಂದಿ ಬಂಽಸಲು ತೆರಳಿದಾಗ ಆರೋಪಿ ಈಚಗೆರೆ ಗ್ರಾಮದ ಕಿರಣ್ ಎಂಬಾತ ಪೊಲೀಸ್ ಪೇದೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ವೃತ್ತ ನಿರೀಕ್ಷಕ ಶ್ರೀಧರ್ ಅವರು ಆರೋಪಿ ಕಿರಣ್ ಕಾಲಿಗೆ ಗುಂಡು ಹಾರಿಸಿ ಪೇದೆಯನ್ನು ರಕ್ಷಿಸಿದ್ದಾರೆ.

ಎಲ್ಲ ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು, ಗುಂಡೇಟಿನಿಂದ ಗಾಯಗೊಂಡ ಆರೋಪಿ ಕಿರಣ್‌ನನ್ನು ಚಿಕಿತ್ಸೆಗಾಗಿ ಮಿಮ್ಸ್‌ಗೆ ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ:
ಕಳೆದ ಆ.೧೬ರ ಶನಿವಾರ ತಡರಾತ್ರಿ ಈ ಮೇಲ್ಕಂಡ ಆರೋಪಿಗಳು ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮಹಾಲಕ್ಷಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ನಡೆಸಲು ತೆರಳಿದ್ದು, ಅಂಗಡಿಯ ಶೆಟರ್‌ನ್ನು ಗ್ಯಾಸ್ ಕಟರ್ ಮೂಲಕ ತುಂಡರಿಸಿ, ೧೧೦ ಗ್ರಾಂ ಚಿನ್ನ, ೨ ಕೆಜಿ ಬೆಳ್ಳಿ ಪದಾರ್ಥಗಳನ್ನು ದೋಚಿದ್ದಾರೆ.

ಜ್ಯುವೆಲರಿ ಅಂಗಡಿಯ ಪಕ್ಕದಲ್ಲೇ ಇದ್ದ ಹೋಟೆಲ್ ಮಾಲೀಕ ಮಹದೇವಪ್ಪ (೬೫) ಅವರು ಹೋಟೆಲ್‌ನಿಂದ ಹೊರಬಂದು ನೋಡಲಾಗಿ ಕಳ್ಳತನ ನಡೆಸುತ್ತಿರುವುದನ್ನು ನೋಡಿ ತಕ್ಷಣ ಕೂಗಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಳ್ಳರ ಗ್ಯಾಂಗ್ ಮಾದಪ್ಪನ ಕತ್ತು ಹಿಸುಕಿ ಕೊಲೆ ಮಾಡಿ, ಜ್ಯುವೆಲರಿ ಅಂಗಡಿಯಲ್ಲಿದ್ದ ಚಿನ್ನಾಭರಣ, ನಗದನ್ನು ದೋಚಿ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕಿರುಗಾವಲು ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ನಡೆಸುತ್ತಿದ್ದರು. ಆರೋಪಿಗಳ ಪತ್ತೆ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ವೃತ್ತ ನಿರೀಕ್ಷಕ ಶ್ರೀಧರ್ ಹಾಗೂ ಸಿಬ್ಬಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಆರೋಪಿಗಳು ಮಳವಳ್ಳಿ ತಾಲ್ಲೂಕು ಭೀಮನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಖಚಿತ ಮಾಹಿತಿ ತಿಳಿದು ದಾಳಿ ಮಾಡಿ, ಎಲ್ಲ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

9 mins ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

29 mins ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

57 mins ago

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

2 hours ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

2 hours ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

2 hours ago