ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್ಎಸ್ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು ಪ್ರಸ್ತುತ ಜಲಾಶಯದಲ್ಲಿ ಸುಮಾರು 82 ಅಡಿಗಳಷ್ಟು ನೀರಿದೆ. ಮುಂಗಾರು ಮಳೆ ಸ್ವಲ್ಪ ತಡವಾಗಿದ್ದರೂ, ಕನ್ನಂಬಾಡಿ ಕಟ್ಟೆಯ ಕೆಳಗಿರುವ ಯಾವುದೇ ಹಳ್ಳಿಗಳಿಗಾಗಲಿ ಅಥವಾ ಬೆಂಗಳೂರು ನಗರಕ್ಕಾಗಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಕೊನೆಯ ತನಕವೂ ಜನರಿಗೆ ಕುಡಿಯುವ ನೀರನ್ನು ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಭರವಸೆ ನೀಡಿದರು.





