ಮಂಡ್ಯ

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ ಅಂದು ಯಾವುದೇ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಮತ್ತು ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ವೖದ್ಯಕೀಯ ಸೇವೆಯಲ್ಲಿ ತೊಂದರೆ ಆಗಬಾರದು ಎಂದು ಹೇಳಿದರು.

ಗರ್ಭಿಣಿಯರು, ಶಿಶುಗಳು, ವೃದ್ಧರು ಹಾಗೂ ಗಂಭೀರ ರೋಗಿಗಳಿಗೆ ಆದ್ಯತೆ ನೀಡಿ ಚಿಕಿತ್ಸೆ ನೀಡಬೇಕು ಮತ್ತು ಡಯಾಲಿಸಿಸ್, ಪ್ರಸೂತಿ, ಐಸಿಯು ಹಾಗೂ ಜೀವ ರಕ್ಷಕ ಸೇವೆಗಳು ನಿರಂತರವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

108 ಆಂಬುಲೆನ್ಸ್ ಸೇವೆ ಹಾಗೂ ರೆಫರಲ್ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಕ್ರಮವಹಿಸಬೇಕು ಮತ್ತು ತಾಲ್ಲೂಕು ಮಟ್ಟದಲ್ಲಿ ಕರ್ತವ್ಯ ವೈದ್ಯರನ್ನು ನಿಯೋಜಿಸಿ ಹಾಜರಾತಿ ಕಡ್ಡಾಯಗೊಳಿಸಬೇಕು ಎಂದು ಹೇಳಿದರು.

ಅಗತ್ಯವಿದ್ದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ವೈದ್ಯರನ್ನು ನಿಯೋಜಿಸಿ ಖಾಸಗಿ ಆಸ್ಪತ್ರೆಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಸಂದರ್ಭಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.ಔಷಧಿ ಮತ್ತು ಉಪಕರಣಗಳ ಲಭ್ಯತೆ ಕುರಿತು ದೈನಂದಿನ ಪರಿಶೀಲನೆ ನಡೆಸಬೇಕು ಮತ್ತು ಆಸ್ಪತ್ರೆಗಳಲ್ಲಿ ಸಹಾಯ ಕೌಂಟರ್ ವ್ಯವಸ್ಥೆ ಸಕ್ರಿಯಗೊಳಿಸಬೇಕು ಎಂದು ತಿಳಿಸಿದರು.

ಯಾವುದೇ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು.ಸಂಘಟನೆಗಳ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಸಂಧಾನ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಲು ಸಂಘಟನೆಗಳು ಸಹಕರಿಸಬೇಕು ಎಂದು ಹೇಳಿದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಯಾವುದೇ ರೀತಿಯ ಮುಷ್ಕರಕ್ಕೆ ಮುಂದಾಗದೆ. ಆರೋಗ್ಯ ಸೇವೆಯನ್ನು ನಿರಂತರವಾಗಿ ನೀಡುವಂತೆ ಸಂಘಟನೆಗಳ ಪ್ರತಿನಿಧಿಗಳಿಗೆ ತಿಳಿಸಿ. “ಜನಾರೋಗ್ಯ ಸೇವೆ ಅತ್ಯಂತ ಪ್ರಾಮುಖ್ಯತೆಯದ್ದು ರೋಗಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಕರ್ತವ್ಯ ನಿರ್ವಹಿಸುವುದು ಜವಾಬ್ದಾರಿಯಾಗಿದೆ” ಎಂದು ಸೂಚಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago