ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಇತ್ತೀಚೆಗೆ ಪ್ರಸಿದ್ಧಿಯಾಗಿರುವ ಶ್ರೀ ಕಾಳಮ್ಮ ದೇವಾಲಯಕ್ಕೆ ಮಂಗಳವಾರ ಮಧ್ಯರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿರುವ ಕಳ್ಳರು ದೇವಾಲಯದ ಪ್ರಾಂಗಣದಲ್ಲಿದ್ದ ಹುಂಡಿಯನ್ನು ಪಕ್ಕಕ್ಕೆ ಹೊತ್ತೊಯ್ದು ಹೊಡೆದು ಹಾಕಿ ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ಹುಂಡಿಯಲ್ಲಿದ್ದ ನಾಣ್ಯಗಳನ್ನು ಅಲ್ಲೇ ಬಿಟ್ಟಿದ್ದು, ಇನ್ನುಳಿದ ನೋಟುಗಳನ್ನೆಲ್ಲ ದೋಚಲಾಗಿದೆ.
ಬುಧವಾರ ಬೆಳಿಗ್ಗೆ ಭಕ್ತರು ಹೋದ ವೇಳೆ ದೇವಾಲಯದ ಬಾಗಿಲ ಬೀಗ ಮುರಿದಿರುವುದು ಕಂಡುಬಂದಿದ್ದು, ಪರಿಶೀಲಿಸಿದಾಗ ಹುಂಡಿ ದೋಚಿರುವುದು ಬೆಳಕಿಗೆ ಬಂದಿದೆ.
ದೇವಾಲಯದ ಉಸ್ತುವಾರಿ ಮುಖಂಡರ ಅಂದಾಜಿನಂತೆ ೧.೫೦ ಲಕ್ಷಕ್ಕೂ ಹೆಚ್ಚು ಹಣ ಹುಂಡಿಯಲ್ಲಿತ್ತು. ಅದನ್ನೆಲ್ಲ ಕಳ್ಳರು ದೋಚಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…