ಮಂಡ್ಯ

ಕಾಳಮ್ಮ ದೇವಾಲಯದ ಹುಂಡಿ ಹೊಡೆದು ಹಣ ದೋಚಿದ ಕಳ್ಳರು

ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್‌ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚೆಗೆ ಪ್ರಸಿದ್ಧಿಯಾಗಿರುವ ಶ್ರೀ ಕಾಳಮ್ಮ ದೇವಾಲಯಕ್ಕೆ ಮಂಗಳವಾರ ಮಧ್ಯರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿರುವ ಕಳ್ಳರು ದೇವಾಲಯದ ಪ್ರಾಂಗಣದಲ್ಲಿದ್ದ ಹುಂಡಿಯನ್ನು ಪಕ್ಕಕ್ಕೆ ಹೊತ್ತೊಯ್ದು ಹೊಡೆದು ಹಾಕಿ ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ಹುಂಡಿಯಲ್ಲಿದ್ದ ನಾಣ್ಯಗಳನ್ನು ಅಲ್ಲೇ ಬಿಟ್ಟಿದ್ದು, ಇನ್ನುಳಿದ ನೋಟುಗಳನ್ನೆಲ್ಲ ದೋಚಲಾಗಿದೆ.

ಬುಧವಾರ ಬೆಳಿಗ್ಗೆ ಭಕ್ತರು ಹೋದ ವೇಳೆ ದೇವಾಲಯದ ಬಾಗಿಲ ಬೀಗ ಮುರಿದಿರುವುದು ಕಂಡುಬಂದಿದ್ದು, ಪರಿಶೀಲಿಸಿದಾಗ ಹುಂಡಿ ದೋಚಿರುವುದು ಬೆಳಕಿಗೆ ಬಂದಿದೆ.

ದೇವಾಲಯದ ಉಸ್ತುವಾರಿ ಮುಖಂಡರ ಅಂದಾಜಿನಂತೆ ೧.೫೦ ಲಕ್ಷಕ್ಕೂ ಹೆಚ್ಚು ಹಣ ಹುಂಡಿಯಲ್ಲಿತ್ತು. ಅದನ್ನೆಲ್ಲ ಕಳ್ಳರು ದೋಚಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

5 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

5 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

5 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

5 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

5 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

5 hours ago