ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಇತ್ತೀಚೆಗೆ ಪ್ರಸಿದ್ಧಿಯಾಗಿರುವ ಶ್ರೀ ಕಾಳಮ್ಮ ದೇವಾಲಯಕ್ಕೆ ಮಂಗಳವಾರ ಮಧ್ಯರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿರುವ ಕಳ್ಳರು ದೇವಾಲಯದ ಪ್ರಾಂಗಣದಲ್ಲಿದ್ದ ಹುಂಡಿಯನ್ನು ಪಕ್ಕಕ್ಕೆ ಹೊತ್ತೊಯ್ದು ಹೊಡೆದು ಹಾಕಿ ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ಹುಂಡಿಯಲ್ಲಿದ್ದ ನಾಣ್ಯಗಳನ್ನು ಅಲ್ಲೇ ಬಿಟ್ಟಿದ್ದು, ಇನ್ನುಳಿದ ನೋಟುಗಳನ್ನೆಲ್ಲ ದೋಚಲಾಗಿದೆ.
ಬುಧವಾರ ಬೆಳಿಗ್ಗೆ ಭಕ್ತರು ಹೋದ ವೇಳೆ ದೇವಾಲಯದ ಬಾಗಿಲ ಬೀಗ ಮುರಿದಿರುವುದು ಕಂಡುಬಂದಿದ್ದು, ಪರಿಶೀಲಿಸಿದಾಗ ಹುಂಡಿ ದೋಚಿರುವುದು ಬೆಳಕಿಗೆ ಬಂದಿದೆ.
ದೇವಾಲಯದ ಉಸ್ತುವಾರಿ ಮುಖಂಡರ ಅಂದಾಜಿನಂತೆ ೧.೫೦ ಲಕ್ಷಕ್ಕೂ ಹೆಚ್ಚು ಹಣ ಹುಂಡಿಯಲ್ಲಿತ್ತು. ಅದನ್ನೆಲ್ಲ ಕಳ್ಳರು ದೋಚಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…