ಮಂಡ್ಯ: ಸ್ಯಾಂಡಲ್ವುಡ್ ಸ್ಟಾರ್ ದರ್ಶನ್ ಅವರು ಇಂದು ಮಂಡ್ಯ ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಭರ್ಜರಿ ಮತ ಭೇಟೆಯಾಡಿದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದು ಮೈತ್ರಿ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆದರೆ ಈವರೆಗೆ ಸುಮಲತಾ ಎಲ್ಲಿಯೂ ಯಾವುದೇ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದು, ಪ್ರಚಾರದಲ್ಲಿ ಅಚ್ಚರಿ ಮಾಹಿತಿ ಬಹಿರಂಗಪಡಿಸಿದ್ದಾರೆ.
ಸುಮಲತಾ ಹಾಗೂ ಎಚ್ಡಿಕೆ ಅವರು ಕಳೆದ ಚುನಾವಣೆ ವೇಳೆ ವಾಗ್ದಾಳಿಗಳು, ಮನಸ್ಥಾಪಗಳು ಕಂಡು ಬಂದಿತ್ತು. ಈ ಬಾರಿ ಚುನಾವಣೆಯಲ್ಲಿ ಸುಮಲತಾ ಬಿಜೆಪಿಯಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಸುಮಲತಾ ಮನವೋಲಿಸಿದ ಬಿಜೆಪಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿತ್ತು. ಇನ್ನು ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲ ನೀಡುತ್ತಾರಾ ಎಂದು ಪ್ರಶ್ನೆಗಳು ಉದ್ಭವಿಸಿದ್ದವು.
ಸುಮಲತಾ ಸದ್ಯ ಯಾವುದೇ ಪ್ರಚಾರಕ್ಕೂ ಹೋಗದೇ ಸುಮ್ಮನಿರುವುದು ಎಲ್ಲರಲ್ಲಿಯೂ ಅಚ್ಚರಿ ಮೂಡಿಸಿತ್ತು. ಇನ್ನು ಸುಮಲತಾರನ್ನು ಅಮ್ಮ ಎಂದೇ ಕರೆಯುವ ನಡ ದರ್ಶನ್, ತನ್ನ ತಾಯಿ ಬಾವಿಗೆ ದುಮುಕು ಎಂದರು ಬೀಳುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸುಮಲತಾ ಗೆ ಯು ಟರ್ನ್ ಹೊಡೆದಿರುವ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಮುಂದಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
ತಾವು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿರುವುದು ರಾಜಕೀಯ ಪಕ್ಷದ ಪರವಾಗಿ ಅಲ್ಲ, ಅಭ್ಯರ್ಥಿಯ ಪರವಾಗಿ ಎಂದಿರುವ ನಟ ದರ್ಶನ್, ಮಾಧ್ಯಮದವರು ಏನೇನೋ ಹಾಕಿದ್ರೆ ತುಂಬಾ ಕಷ್ಟ ಅಗುತ್ತೆ. ಹೀಗಾಗಿ ನಾನೇ ಸ್ಪಷ್ಟನೆ ಕೊಡುತ್ತಿದ್ದೇನೆ. ಸುಮಲತಾಗೆ ಟಿಕೆಟ್ ಸಿಗದಿದ್ದರೇ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಬೇಕು ಎಂದು ಉದಯ್ ಗೌಡ್ರು ಕೇಳಿದ್ದರು. ಮೊದಲು ಅವರು ಕರೆದಿದ್ದರು ಎನ್ನುವ ಕಾರಣಕ್ಕಾಗಿ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಮತ ನೀಡುವ ಮೂಲಕ ಉದಯ್-ನರೇಂದ್ರ ಕೈಗಳನ್ನು ಬಲಪಡಿಸಿ ಎಂದು ಡಿ ಬಾಸ್ ಮತಯಾಚನೆ ಮಾಡಿದರು.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…