ಮಂಡ್ಯ

ಇದೇ ಕಾರಣಕ್ಕಾಗಿ ನಾನು ಸ್ಟಾರ್‌ ಚಂದ್ರು ಪರ ಪ್ರಚಾರಕ್ಕೆ ಬಂದೆ: ಮಂಡ್ಯದಲ್ಲಿ ಡಿಬಾಸ್‌ ಫಸ್ಟ್‌ ರಿಯಾಕ್ಷನ್‌!

ಮಂಡ್ಯ: ಸ್ಯಾಂಡಲ್‌ವುಡ್‌ ಸ್ಟಾರ್‌ ದರ್ಶನ್‌ ಅವರು ಇಂದು ಮಂಡ್ಯ ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಭರ್ಜರಿ ಮತ ಭೇಟೆಯಾಡಿದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದು ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆದರೆ ಈವರೆಗೆ ಸುಮಲತಾ ಎಲ್ಲಿಯೂ ಯಾವುದೇ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಈ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದು, ಪ್ರಚಾರದಲ್ಲಿ ಅಚ್ಚರಿ ಮಾಹಿತಿ ಬಹಿರಂಗಪಡಿಸಿದ್ದಾರೆ.

ಸುಮಲತಾ ಹಾಗೂ ಎಚ್ಡಿಕೆ ಅವರು ಕಳೆದ ಚುನಾವಣೆ ವೇಳೆ ವಾಗ್ದಾಳಿಗಳು, ಮನಸ್ಥಾಪಗಳು ಕಂಡು ಬಂದಿತ್ತು. ಈ ಬಾರಿ ಚುನಾವಣೆಯಲ್ಲಿ ಸುಮಲತಾ ಬಿಜೆಪಿಯಿಂದ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಸುಮಲತಾ ಮನವೋಲಿಸಿದ ಬಿಜೆಪಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿತ್ತು. ಇನ್ನು ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲ ನೀಡುತ್ತಾರಾ ಎಂದು ಪ್ರಶ್ನೆಗಳು ಉದ್ಭವಿಸಿದ್ದವು.

ಸುಮಲತಾ ಸದ್ಯ ಯಾವುದೇ ಪ್ರಚಾರಕ್ಕೂ ಹೋಗದೇ ಸುಮ್ಮನಿರುವುದು ಎಲ್ಲರಲ್ಲಿಯೂ ಅಚ್ಚರಿ ಮೂಡಿಸಿತ್ತು. ಇನ್ನು ಸುಮಲತಾರನ್ನು ಅಮ್ಮ ಎಂದೇ ಕರೆಯುವ ನಡ ದರ್ಶನ್‌, ತನ್ನ ತಾಯಿ ಬಾವಿಗೆ ದುಮುಕು ಎಂದರು ಬೀಳುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸುಮಲತಾ ಗೆ ಯು ಟರ್ನ್‌ ಹೊಡೆದಿರುವ ದರ್ಶನ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ಮುಂದಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ತಾವು ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿರುವುದು ರಾಜಕೀಯ ಪಕ್ಷದ ಪರವಾಗಿ ಅಲ್ಲ, ಅಭ್ಯರ್ಥಿಯ ಪರವಾಗಿ ಎಂದಿರುವ ನಟ ದರ್ಶನ್‌, ಮಾಧ್ಯಮದವರು ಏನೇನೋ ಹಾಕಿದ್ರೆ ತುಂಬಾ ಕಷ್ಟ ಅಗುತ್ತೆ. ಹೀಗಾಗಿ ನಾನೇ ಸ್ಪಷ್ಟನೆ ಕೊಡುತ್ತಿದ್ದೇನೆ. ಸುಮಲತಾಗೆ ಟಿಕೆಟ್‌ ಸಿಗದಿದ್ದರೇ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಬೇಕು ಎಂದು ಉದಯ್‌ ಗೌಡ್ರು ಕೇಳಿದ್ದರು. ಮೊದಲು ಅವರು ಕರೆದಿದ್ದರು ಎನ್ನುವ ಕಾರಣಕ್ಕಾಗಿ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್‌ ಚಂದ್ರು ಅವರಿಗೆ ಮತ ನೀಡುವ ಮೂಲಕ ಉದಯ್‌-ನರೇಂದ್ರ ಕೈಗಳನ್ನು ಬಲಪಡಿಸಿ ಎಂದು ಡಿ ಬಾಸ್‌ ಮತಯಾಚನೆ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago