ಮಂಡ್ಯ

ಇದೇ ಕಾರಣಕ್ಕಾಗಿ ನಾನು ಸ್ಟಾರ್‌ ಚಂದ್ರು ಪರ ಪ್ರಚಾರಕ್ಕೆ ಬಂದೆ: ಮಂಡ್ಯದಲ್ಲಿ ಡಿಬಾಸ್‌ ಫಸ್ಟ್‌ ರಿಯಾಕ್ಷನ್‌!

ಮಂಡ್ಯ: ಸ್ಯಾಂಡಲ್‌ವುಡ್‌ ಸ್ಟಾರ್‌ ದರ್ಶನ್‌ ಅವರು ಇಂದು ಮಂಡ್ಯ ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಭರ್ಜರಿ ಮತ ಭೇಟೆಯಾಡಿದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದು ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆದರೆ ಈವರೆಗೆ ಸುಮಲತಾ ಎಲ್ಲಿಯೂ ಯಾವುದೇ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಈ ನಡುವೆ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕಿಳಿದಿದ್ದು, ಪ್ರಚಾರದಲ್ಲಿ ಅಚ್ಚರಿ ಮಾಹಿತಿ ಬಹಿರಂಗಪಡಿಸಿದ್ದಾರೆ.

ಸುಮಲತಾ ಹಾಗೂ ಎಚ್ಡಿಕೆ ಅವರು ಕಳೆದ ಚುನಾವಣೆ ವೇಳೆ ವಾಗ್ದಾಳಿಗಳು, ಮನಸ್ಥಾಪಗಳು ಕಂಡು ಬಂದಿತ್ತು. ಈ ಬಾರಿ ಚುನಾವಣೆಯಲ್ಲಿ ಸುಮಲತಾ ಬಿಜೆಪಿಯಿಂದ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಸುಮಲತಾ ಮನವೋಲಿಸಿದ ಬಿಜೆಪಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿತ್ತು. ಇನ್ನು ಕುಮಾರಸ್ವಾಮಿ ಅವರಿಗೆ ಸುಮಲತಾ ಬೆಂಬಲ ನೀಡುತ್ತಾರಾ ಎಂದು ಪ್ರಶ್ನೆಗಳು ಉದ್ಭವಿಸಿದ್ದವು.

ಸುಮಲತಾ ಸದ್ಯ ಯಾವುದೇ ಪ್ರಚಾರಕ್ಕೂ ಹೋಗದೇ ಸುಮ್ಮನಿರುವುದು ಎಲ್ಲರಲ್ಲಿಯೂ ಅಚ್ಚರಿ ಮೂಡಿಸಿತ್ತು. ಇನ್ನು ಸುಮಲತಾರನ್ನು ಅಮ್ಮ ಎಂದೇ ಕರೆಯುವ ನಡ ದರ್ಶನ್‌, ತನ್ನ ತಾಯಿ ಬಾವಿಗೆ ದುಮುಕು ಎಂದರು ಬೀಳುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸುಮಲತಾ ಗೆ ಯು ಟರ್ನ್‌ ಹೊಡೆದಿರುವ ದರ್ಶನ್‌ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ಮುಂದಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ತಾವು ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿರುವುದು ರಾಜಕೀಯ ಪಕ್ಷದ ಪರವಾಗಿ ಅಲ್ಲ, ಅಭ್ಯರ್ಥಿಯ ಪರವಾಗಿ ಎಂದಿರುವ ನಟ ದರ್ಶನ್‌, ಮಾಧ್ಯಮದವರು ಏನೇನೋ ಹಾಕಿದ್ರೆ ತುಂಬಾ ಕಷ್ಟ ಅಗುತ್ತೆ. ಹೀಗಾಗಿ ನಾನೇ ಸ್ಪಷ್ಟನೆ ಕೊಡುತ್ತಿದ್ದೇನೆ. ಸುಮಲತಾಗೆ ಟಿಕೆಟ್‌ ಸಿಗದಿದ್ದರೇ ನಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಬೇಕು ಎಂದು ಉದಯ್‌ ಗೌಡ್ರು ಕೇಳಿದ್ದರು. ಮೊದಲು ಅವರು ಕರೆದಿದ್ದರು ಎನ್ನುವ ಕಾರಣಕ್ಕಾಗಿ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್‌ ಚಂದ್ರು ಅವರಿಗೆ ಮತ ನೀಡುವ ಮೂಲಕ ಉದಯ್‌-ನರೇಂದ್ರ ಕೈಗಳನ್ನು ಬಲಪಡಿಸಿ ಎಂದು ಡಿ ಬಾಸ್‌ ಮತಯಾಚನೆ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

58 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

4 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

4 hours ago