ಮಂಡ್ಯ

ದಸರಾ ಉದ್ಘಾಟಕಿ ಬಾನು ಮುಷ್ತಾಕ್‌ ವಿರೋಧಿಸುವವರು ಟೈಮ್‌ ವೇಸ್ಟ್‌ ಗಿರಾಕಿಗಳು : ಶಾಸಕ ಗಣಿಗ ರವಿಕುಮಾರ್ ಕಿಡಿ

ಮಂಡ್ಯ : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಸದ್ಯ ಈ ಬಗ್ಗೆ ಕಳೆದೆರಡು ದಿನದಿಂದ ಪರ-ವಿರೋಧ ಚರ್ಚೆಗಳು ಹುಟ್ಟಿಕೊಂಡಿವೆ. ಬಿಜೆಪಿ ದಸರಾ ಧಾರ್ಮಿಕ ಹಬ್ಬ ಹೀಗಾಗಿ ಅವರ ಆಯ್ಕೆ ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಡಿಸಿದರೆ, ಕಾಂಗ್ರೆಸ್‌ ದಸರಾ ನಾಡಹಬ್ಬ, ಜಾತ್ಯತೀತ ಹಬ್ಬ ಎಂದು ಸಮರ್ಥಿಸಿಕೊಳ್ಳುತ್ತಿದೆ. ಸದ್ಯ ಈ ವಿಚಾರವಾಗಿ ಮಂಡ್ಯ ಶಾಸಕ ಗಣಿಕ ರವಿಕುಮಾರ್‌ ಅವರು ಮಾತನಾಡಿ, ವಿರೋಧ ಮಾಡುವವರು ಟೈಮ್‌ ವೇಸ್ಟ್‌ ಗಿರಾಕಿಗಳು ಎಂದು ಕಿಡಿಕಾರಿದ್ದಾರೆ.

ದಸರಾ ಉದ್ಘಾಟನೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ‌ ಶಾಸಕ ರವಿಕುಮಾರ್, ಎಲ್ಲದಕ್ಕೂ ವಿರೋಧ ಮಾಡುತ್ತಾರೆ ಬಿಡಿ. ವಿರೋಧ ಮಾಡುವವರು ಟೈಮ್ ವೇಸ್ಟ್ ಗಿರಾಕಿಗಳು. ಅಬ್ದುಲ್ ಕಲಾಂ ಈ ದೇಶದ ರಾಷ್ಟ್ರಪತಿ ಆಗಬಹುದು. ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಬಹುದು.

೯೦ ಕೋಟಿ ಮಹಿಳೆಯರ ಪರವಾಗಿರುವ ಮಹಿಳೆಯನ್ನು ವಿರೋಧ ಮಾಡುತ್ತಾರೆ ಎಂದರೆ ಮಹಿಳೆಯರಿಗೆ ಬಿಜೆಪಿಯವರು ಅಪಮಾನ ಮಾಡಿದಂತೆ. ಅವರ ವಿಚಾರ ದೇವಸ್ಥಾನ, ಮುಸ್ಲಿಂ, ಪಾಕಿಸ್ತಾನ, ಅಮೆರಿಕಾ ಅಷ್ಟೆ. ಟ್ಯಾಕ್ಸ್ ಬಗ್ಗೆ ಟ್ರಂಪ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಶ್ನೆ ಮಾಡಲಿ. ಬಿಜೆಪಿಯವರನ್ನು ಚಾಮುಂಡೇಶ್ವರಿ ಸಹ ಒಪ್ಪಲ್ಲ. ಭಾರತ ಸರ್ವಧರ್ಮದ ನೆಲೆ. ಮತಕ್ಕಾಗಿ ಮಾತನಾಡುತ್ತೇವೆಂದು ಬಿಜೆಪಿ ಹೇಳಿಲಿ. ನಾವು ಸರ್ವ ಧರ್ಮಗಳ ಪರ ಇದ್ದೇವೆ. ಬಾನು ಮುಷ್ತಾಕ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

ಆಂದೋಲನ ಡೆಸ್ಕ್

Recent Posts

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

50 mins ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

55 mins ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

59 mins ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

1 hour ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

2 hours ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

2 hours ago