ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ದಳವಾಯಿ ಕೋಡಿಹಳ್ಳಿ ಗ್ರಾಮದ ಎಂ.ಮಹೇಶ್ ಅವರ ಪತ್ನಿ ಶಕುಂತಲಾ (37) ಮತ್ತು ಮಗಳು ಪ್ರಿಯಾ (18) ಮೃತಪಟ್ಟವರು.
ಘಟನೆ ವಿವರ :
ಗ್ರಾಮದ ಪಕ್ಕದ ಮನೆಯ ನಿವಾಸಿ 35 ವರ್ಷದ ವಿವಾಹಿತ ಮುತ್ತುರಾಜು ಎಂಬ ವ್ಯಕ್ತಿ ಮಗಳು ಪ್ರಿಯಾ ಅವರನ್ನು ಪರಿಚಯ ಮಾಡಿಕೊಂಡು ನಿನ್ನನ್ನು ಮದುವೆ ಮಾಡಿಕೊಳ್ಳುತ್ತನೆಂದು ಪುಸಲಾಯಿಸಿದ್ದಾನೆ. ಇದಕ್ಕೆ ಒಪ್ಪದ ತಾಯಿ ಶಕುಂತಲಾ ಮತ್ತು ತಂದೆ ಮಹೇಶ್ ನಿನಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿ ಮತ್ತು ಮಕ್ಕಳಿದ್ದಾರೆ ಮತ್ತೆ ಮದುವೆ ಸಾಧ್ಯವಿಲ್ಲ ಎಂದು ಮುತ್ತುರಾಜನಿಗೆ ಬುದ್ದಿ ಹೇಳಿದ್ದಾರೆ.
ಬಳಿಕ ಮಗಳಾದ ಪ್ರಿಯಾಳಿಗೆ ಬೇರೆಯ ವರನಿಗೆ ಮದುವೆ ಮಾಡೋಣ ಎಂದು ಸಿದ್ದತೆ ಮಾಡಿಕೊಳ್ಳುತ್ತಿರುವ ವಿಷಯ ತಿಳಿದ ಮುತ್ತುರಾಜು ಶಕುಂತಲಾ ಅವರಿಗೆ ಕರೆ ಮಾಡಿ, ಪ್ರಿಯಾಳನ್ನು ಬೇರೆ ಕಡೆಗೆ ಮದುವೆ ಮಾಡಿದರೇ ನಿಮ್ಮನ್ನು ಕೊಲೆ ಮಾಡುವೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ತಾಯಿ ಶಕುಂತಲಾ ಮತ್ತು ಮಗಳು ಪ್ರಿಯಾ ಇಬ್ಬರು ಭಾನುವಾರ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶಕುಂತಲ ಗಂಡ ಎಂ.ಮಹೇಶ್ ದೂರಿನಲ್ಲಿ ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…
ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…
ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…
ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ…