ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ದಳವಾಯಿ ಕೋಡಿಹಳ್ಳಿ ಗ್ರಾಮದ ಎಂ.ಮಹೇಶ್ ಅವರ ಪತ್ನಿ ಶಕುಂತಲಾ (37) ಮತ್ತು ಮಗಳು ಪ್ರಿಯಾ (18) ಮೃತಪಟ್ಟವರು.
ಘಟನೆ ವಿವರ :
ಗ್ರಾಮದ ಪಕ್ಕದ ಮನೆಯ ನಿವಾಸಿ 35 ವರ್ಷದ ವಿವಾಹಿತ ಮುತ್ತುರಾಜು ಎಂಬ ವ್ಯಕ್ತಿ ಮಗಳು ಪ್ರಿಯಾ ಅವರನ್ನು ಪರಿಚಯ ಮಾಡಿಕೊಂಡು ನಿನ್ನನ್ನು ಮದುವೆ ಮಾಡಿಕೊಳ್ಳುತ್ತನೆಂದು ಪುಸಲಾಯಿಸಿದ್ದಾನೆ. ಇದಕ್ಕೆ ಒಪ್ಪದ ತಾಯಿ ಶಕುಂತಲಾ ಮತ್ತು ತಂದೆ ಮಹೇಶ್ ನಿನಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿ ಮತ್ತು ಮಕ್ಕಳಿದ್ದಾರೆ ಮತ್ತೆ ಮದುವೆ ಸಾಧ್ಯವಿಲ್ಲ ಎಂದು ಮುತ್ತುರಾಜನಿಗೆ ಬುದ್ದಿ ಹೇಳಿದ್ದಾರೆ.
ಬಳಿಕ ಮಗಳಾದ ಪ್ರಿಯಾಳಿಗೆ ಬೇರೆಯ ವರನಿಗೆ ಮದುವೆ ಮಾಡೋಣ ಎಂದು ಸಿದ್ದತೆ ಮಾಡಿಕೊಳ್ಳುತ್ತಿರುವ ವಿಷಯ ತಿಳಿದ ಮುತ್ತುರಾಜು ಶಕುಂತಲಾ ಅವರಿಗೆ ಕರೆ ಮಾಡಿ, ಪ್ರಿಯಾಳನ್ನು ಬೇರೆ ಕಡೆಗೆ ಮದುವೆ ಮಾಡಿದರೇ ನಿಮ್ಮನ್ನು ಕೊಲೆ ಮಾಡುವೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ತಾಯಿ ಶಕುಂತಲಾ ಮತ್ತು ಮಗಳು ಪ್ರಿಯಾ ಇಬ್ಬರು ಭಾನುವಾರ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶಕುಂತಲ ಗಂಡ ಎಂ.ಮಹೇಶ್ ದೂರಿನಲ್ಲಿ ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…