ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ದಳವಾಯಿ ಕೋಡಿಹಳ್ಳಿ ಗ್ರಾಮದ ಎಂ.ಮಹೇಶ್ ಅವರ ಪತ್ನಿ ಶಕುಂತಲಾ (37) ಮತ್ತು ಮಗಳು ಪ್ರಿಯಾ (18) ಮೃತಪಟ್ಟವರು.
ಘಟನೆ ವಿವರ :
ಗ್ರಾಮದ ಪಕ್ಕದ ಮನೆಯ ನಿವಾಸಿ 35 ವರ್ಷದ ವಿವಾಹಿತ ಮುತ್ತುರಾಜು ಎಂಬ ವ್ಯಕ್ತಿ ಮಗಳು ಪ್ರಿಯಾ ಅವರನ್ನು ಪರಿಚಯ ಮಾಡಿಕೊಂಡು ನಿನ್ನನ್ನು ಮದುವೆ ಮಾಡಿಕೊಳ್ಳುತ್ತನೆಂದು ಪುಸಲಾಯಿಸಿದ್ದಾನೆ. ಇದಕ್ಕೆ ಒಪ್ಪದ ತಾಯಿ ಶಕುಂತಲಾ ಮತ್ತು ತಂದೆ ಮಹೇಶ್ ನಿನಗೆ ಈಗಾಗಲೇ ಮದುವೆಯಾಗಿದ್ದು, ಹೆಂಡತಿ ಮತ್ತು ಮಕ್ಕಳಿದ್ದಾರೆ ಮತ್ತೆ ಮದುವೆ ಸಾಧ್ಯವಿಲ್ಲ ಎಂದು ಮುತ್ತುರಾಜನಿಗೆ ಬುದ್ದಿ ಹೇಳಿದ್ದಾರೆ.
ಬಳಿಕ ಮಗಳಾದ ಪ್ರಿಯಾಳಿಗೆ ಬೇರೆಯ ವರನಿಗೆ ಮದುವೆ ಮಾಡೋಣ ಎಂದು ಸಿದ್ದತೆ ಮಾಡಿಕೊಳ್ಳುತ್ತಿರುವ ವಿಷಯ ತಿಳಿದ ಮುತ್ತುರಾಜು ಶಕುಂತಲಾ ಅವರಿಗೆ ಕರೆ ಮಾಡಿ, ಪ್ರಿಯಾಳನ್ನು ಬೇರೆ ಕಡೆಗೆ ಮದುವೆ ಮಾಡಿದರೇ ನಿಮ್ಮನ್ನು ಕೊಲೆ ಮಾಡುವೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ತಾಯಿ ಶಕುಂತಲಾ ಮತ್ತು ಮಗಳು ಪ್ರಿಯಾ ಇಬ್ಬರು ಭಾನುವಾರ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶಕುಂತಲ ಗಂಡ ಎಂ.ಮಹೇಶ್ ದೂರಿನಲ್ಲಿ ತಿಳಿಸಿದ್ದಾರೆ.
ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…