ಮಂಡ್ಯ: ಬಿಜೆಪಿಯಲ್ಲಿ ನನಗೆ ಉತ್ತಮ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಹಾಗಾಗಿ ನಾನು ಈ ಚುನಾವಣೆಯಿಂದ ಹಿಂದೆ ಸರಿದೆ. ಜೆಪಿ ನಡ್ಡಾ, ನಾಗಮೋಹನ್ ದಾಸ್ ಅವರ ನಿಮಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದ್ದಾರೆ. ಈ ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿಯಿಲ್ಲ. ಇಲ್ಲಿನ ಚುನಾವಣೆಗಾಗಿ ಇನ್ನೂ ನಾಲ್ಕು ವರ್ಷಗಳು ಕಾಯಬೇಕು. ಅದನ್ನು ಬಿಟ್ಟು ಕೇಂದ್ರ ರಾಜಕೀಯದ ಕಡೆ ಗಮನ ನೀಡಬೇಕು ಎಂದುಕೊಂಡಿದ್ದೇನೆ. ಸದ್ಯ ಈ ಬಾರಿಯ ಚುನಾವಣೆಯಲ್ಲಿ ಏನಾಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಯಾವಾಗ ಅಧಿಕಾರಕ್ಕೆ ಬರುತ್ತದೆ ಎಂದು ಕಾಯುತ್ತಿದ್ದೇನೆ. ಈಗಲೇ ಯಾವುದೇ ಸ್ಥಾನಮಾನಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು.
ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದರು. ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಚಾರಕ್ಕಾಗಿ ಯಾರು ನನಗೆ ಏನು ಹೇಳಿಲ್ಲ. ಹಾಗಾಗಿ ಇದರ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ ಎಂದರು.
ಇನ್ನು ತಮ್ಮ ಪುತ್ರ ಅಭಿಷೇಕ್ ರಾಜಕೀಯ ಎಂಟ್ರಿ ಬಗ್ಗೆ ಮಾತನಾಡಿ, ನಾನು ರಾಜಕೀಯದಲ್ಲಿ ಇರುವವರೆಗೂ ಅಭಿ ಚುನಾವಣೆಗೆ ಬರುವುದಿಲ್ಲ. ಅಭಿಷೇಕ್ ಕೂಡಾ ಇದೇ ಮಾತು ಹೇಳಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…