ಮಂಡ್ಯ: ಇಂದಿನಿಂದಲೇ ಗೃಹಲಕ್ಷ್ಮೀಯರ ಖಾತೆಗೆ ಗೃಹಲಕ್ಷ್ಮೀ ಗಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳಿನಿಂದ ಹಣ ಜಮೆ ಆಗಿರಲಿಲ್ಲ. ಈಗ ಎಲ್ಲವೂ ಸರಿಯಾಗಿದೆ. ಇಂದೇ ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗಲಿದೆ ಎಂದು ಘೋಷಿಸಿದರು.
ಈ ಮೂಲಕ ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ ಸರ್ಕಾರ ಗುಡ್ನ್ಯೂಸ್ ನೀಡಿದ್ದು, ಗೃಹಲಕ್ಷ್ಮೀ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದೇ ಹಣ ಜಮೆಯಾಗಲಿದೆ.
ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂದು ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಇಂದೇ ಹಣ ಜಮಾವಣೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ ಬ್ಯಾಂಕ್ಗೆ ಅಲೆದು ಅಲೆದು ಸುಸ್ತಾಗಿದ್ದ ಮಹಿಳೆಯರಿಗೆ ಈಗ ರಿಲೀಫ್ ಸಿಕ್ಕಿದೆ.
ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…
ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…