ಮಂಡ್ಯ

ನಾಳೆ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ

ಶ್ರೀರಂಗಪಟ್ಟಣ : ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ ವೇದಿಕೆ ಕಾಮಗಾರಿಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ದಸರಾ ಉದ್ಘಾಟನಾ ಸ್ಥಳವಾದ ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ಸುಣ್ಣ-ಬಣ್ಣ ಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸಿದರು.

ಈ ವೇಳೆ ಹಾಜರಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಳೆದ ವರ್ಷದಂತೆ ಈ ವರ್ಷವೂ ಸಹ ಯಶಸ್ವಿಯಾಗಿ ದಸರಾ ಉತ್ಸವವನ್ನು ನಡೆಸಲು ಎಲ್ಲಾ ಅಧಿಕಾರಿಗಳು ಸಹಕರಿಸಲು ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸುವಂತೆ ಸೂಚಿಸಿದರು. ವೇದಿಕೆ ನಿರ್ಮಾಣದಲ್ಲಿ ಯಾವುದೇ ಲೋಪವಿಲ್ಲದಂತೆ ನಿರ್ಮಾಣವಾಗಬೇಕು. ವಾಹನಗಳ ನಿಲುಗಡೆಗೆ ಸರಿಯಾದ ಸ್ಥಳವನ್ನು ನಿಗದಿಪಡಿಸಬೇಕು, ಕಾರ್ಯಕ್ರಮದ ರೂಪುರೇಶೆಗಳನ್ನು ಸಿದ್ಧಪಡಿಸಲು ರಚಿಸಲಾಗುವ ವಿವಿಧ ಸಮಿತಿಗಳು ಯಾವುದೇ ಲೋಪ ಬಾರದಂತೆ ವಹಿಸಿರುವ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಡೆಸಲು ತಿಳಿಸಿದರು.

ಇದನ್ನೂ ಓದಿ:-ಹನೂರು | ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವು

ಮನೋರಂಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಬಗ್ಗೆ ಯಾವುದೇ ವ್ಯತಿರಿಕ್ತವಾಗದಂತೆ ಕ್ರಮವಹಿಸಬೇಕು. ವೇದಿಕೆ ಬಳಿ ವಿವಿಧ ಇಲಾಖೆಗಳಿಂದ ಮಳಿಗೆ ನಿರ್ಮಾಣ ಮಾಡಿ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಅಗತ್ಯ ಕ್ರಮವಹಿಸಬೇಕು. ಬನ್ನಿಮಂಟಪ ಹಾಗೂ ವೇದಿಕೆ ನಿರ್ಮಾಣದಲ್ಲಿ ಶುಚಿತ್ವದಲ್ಲಿ ರಾಜಿಯಿಲ್ಲದಂತೆ ಕ್ರಮವಹಿಸಬೇಕು. ಶ್ರೀರಂಗಪಟ್ಟಣ ದಸರಾ ಆನೆಗಳನ್ನು ವ್ಯವಸ್ಥಿತವಾಗಿ ಸ್ವಾಗತಿಸುವ ಕುರಿತು ಸೂಚನೆಗಳನ್ನು ನೀಡಿದರು. ಹಾಗೂ ದಸರಾ ಆನೆಗಳು ಆಗಮಿಸಿದ ನಂತರ ಪೂಜಾ ಕಾರ್ಯಕ್ರಮಗಳಲ್ಲಿ ಎಲ್ಲಾ ಅಧಿಕಾರಿಗಳೊಂದಿಗೆ ಪಾಲ್ಗೊಂಡರು.

ಶ್ರೀರಂಗಪಟ್ಟಣ ದಸರಾ ಉತ್ಸವ-೨೦೨೫ ಅನ್ನು ಯಾವುದೇ ಲೋಪ ಬಾರದಂತೆ ನಿರ್ವಹಣೆ ಮಾಡಲು ತಿಳಿಸಿದರು.

ಶ್ರೀರಂಗಪಟ್ಟಣಕ್ಕೆ ದಸರಾ ಆನೆಗಳು ಆಗಮಿಸಿದ ಬಳಿಕ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂದೆ ಜಿಲ್ಲಾಽಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತಿತರ ಅಧಿಕಾರಿಗಳು ಆನೆಗಳನ್ನು ಸ್ವಾಗತಿಸಿ ಪೂಜೆ ಸಲ್ಲಿಸಿದರು. ನಾಳೆ ಅಧಿಕೃತವಾಗಿ ಶ್ರೀರಂಗಪಟ್ಟಣ ದಸರೆಗೆ ಚಾಲನೆ ಸಿಗಲಿದೆ.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಽಕಾರಿ ಡಾ.ಕುಮಾರ ಹಾಗೂ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಶ್ರೀರಂಗಪಟ್ಟಣ ದಸರಾ ನಡೆಯುವ ಶ್ರೀರಂಗವೇದಿಕೆ ಹಾಗೂ ಕಿರಂಗೂರು ಬನ್ನಿಮಂಟಪದ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

3 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

3 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

3 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

3 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

6 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

6 hours ago