ಮಂಡ್ಯ

ನಾಳೆ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ

ಶ್ರೀರಂಗಪಟ್ಟಣ : ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ ವೇದಿಕೆ ಕಾಮಗಾರಿಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ದಸರಾ ಉದ್ಘಾಟನಾ ಸ್ಥಳವಾದ ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ಸುಣ್ಣ-ಬಣ್ಣ ಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸಿದರು.

ಈ ವೇಳೆ ಹಾಜರಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಳೆದ ವರ್ಷದಂತೆ ಈ ವರ್ಷವೂ ಸಹ ಯಶಸ್ವಿಯಾಗಿ ದಸರಾ ಉತ್ಸವವನ್ನು ನಡೆಸಲು ಎಲ್ಲಾ ಅಧಿಕಾರಿಗಳು ಸಹಕರಿಸಲು ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸುವಂತೆ ಸೂಚಿಸಿದರು. ವೇದಿಕೆ ನಿರ್ಮಾಣದಲ್ಲಿ ಯಾವುದೇ ಲೋಪವಿಲ್ಲದಂತೆ ನಿರ್ಮಾಣವಾಗಬೇಕು. ವಾಹನಗಳ ನಿಲುಗಡೆಗೆ ಸರಿಯಾದ ಸ್ಥಳವನ್ನು ನಿಗದಿಪಡಿಸಬೇಕು, ಕಾರ್ಯಕ್ರಮದ ರೂಪುರೇಶೆಗಳನ್ನು ಸಿದ್ಧಪಡಿಸಲು ರಚಿಸಲಾಗುವ ವಿವಿಧ ಸಮಿತಿಗಳು ಯಾವುದೇ ಲೋಪ ಬಾರದಂತೆ ವಹಿಸಿರುವ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಡೆಸಲು ತಿಳಿಸಿದರು.

ಇದನ್ನೂ ಓದಿ:-ಹನೂರು | ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವು

ಮನೋರಂಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಬಗ್ಗೆ ಯಾವುದೇ ವ್ಯತಿರಿಕ್ತವಾಗದಂತೆ ಕ್ರಮವಹಿಸಬೇಕು. ವೇದಿಕೆ ಬಳಿ ವಿವಿಧ ಇಲಾಖೆಗಳಿಂದ ಮಳಿಗೆ ನಿರ್ಮಾಣ ಮಾಡಿ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಅಗತ್ಯ ಕ್ರಮವಹಿಸಬೇಕು. ಬನ್ನಿಮಂಟಪ ಹಾಗೂ ವೇದಿಕೆ ನಿರ್ಮಾಣದಲ್ಲಿ ಶುಚಿತ್ವದಲ್ಲಿ ರಾಜಿಯಿಲ್ಲದಂತೆ ಕ್ರಮವಹಿಸಬೇಕು. ಶ್ರೀರಂಗಪಟ್ಟಣ ದಸರಾ ಆನೆಗಳನ್ನು ವ್ಯವಸ್ಥಿತವಾಗಿ ಸ್ವಾಗತಿಸುವ ಕುರಿತು ಸೂಚನೆಗಳನ್ನು ನೀಡಿದರು. ಹಾಗೂ ದಸರಾ ಆನೆಗಳು ಆಗಮಿಸಿದ ನಂತರ ಪೂಜಾ ಕಾರ್ಯಕ್ರಮಗಳಲ್ಲಿ ಎಲ್ಲಾ ಅಧಿಕಾರಿಗಳೊಂದಿಗೆ ಪಾಲ್ಗೊಂಡರು.

ಶ್ರೀರಂಗಪಟ್ಟಣ ದಸರಾ ಉತ್ಸವ-೨೦೨೫ ಅನ್ನು ಯಾವುದೇ ಲೋಪ ಬಾರದಂತೆ ನಿರ್ವಹಣೆ ಮಾಡಲು ತಿಳಿಸಿದರು.

ಶ್ರೀರಂಗಪಟ್ಟಣಕ್ಕೆ ದಸರಾ ಆನೆಗಳು ಆಗಮಿಸಿದ ಬಳಿಕ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂದೆ ಜಿಲ್ಲಾಽಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತಿತರ ಅಧಿಕಾರಿಗಳು ಆನೆಗಳನ್ನು ಸ್ವಾಗತಿಸಿ ಪೂಜೆ ಸಲ್ಲಿಸಿದರು. ನಾಳೆ ಅಧಿಕೃತವಾಗಿ ಶ್ರೀರಂಗಪಟ್ಟಣ ದಸರೆಗೆ ಚಾಲನೆ ಸಿಗಲಿದೆ.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಽಕಾರಿ ಡಾ.ಕುಮಾರ ಹಾಗೂ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಶ್ರೀರಂಗಪಟ್ಟಣ ದಸರಾ ನಡೆಯುವ ಶ್ರೀರಂಗವೇದಿಕೆ ಹಾಗೂ ಕಿರಂಗೂರು ಬನ್ನಿಮಂಟಪದ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago