ಮಂಡ್ಯ

ನಾಳೆ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ

ಶ್ರೀರಂಗಪಟ್ಟಣ : ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿನ ಶ್ರೀರಂಗ ವೇದಿಕೆ ಕಾಮಗಾರಿಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ದಸರಾ ಉದ್ಘಾಟನಾ ಸ್ಥಳವಾದ ಕಿರಂಗೂರು ಬನ್ನಿಮಂಟಪಕ್ಕೆ ಭೇಟಿ ನೀಡಿ ಸುಣ್ಣ-ಬಣ್ಣ ಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸಿದರು.

ಈ ವೇಳೆ ಹಾಜರಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಳೆದ ವರ್ಷದಂತೆ ಈ ವರ್ಷವೂ ಸಹ ಯಶಸ್ವಿಯಾಗಿ ದಸರಾ ಉತ್ಸವವನ್ನು ನಡೆಸಲು ಎಲ್ಲಾ ಅಧಿಕಾರಿಗಳು ಸಹಕರಿಸಲು ತಿಳಿಸಿದರು.

ಪೊಲೀಸ್ ಇಲಾಖೆಯಿಂದ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸುವಂತೆ ಸೂಚಿಸಿದರು. ವೇದಿಕೆ ನಿರ್ಮಾಣದಲ್ಲಿ ಯಾವುದೇ ಲೋಪವಿಲ್ಲದಂತೆ ನಿರ್ಮಾಣವಾಗಬೇಕು. ವಾಹನಗಳ ನಿಲುಗಡೆಗೆ ಸರಿಯಾದ ಸ್ಥಳವನ್ನು ನಿಗದಿಪಡಿಸಬೇಕು, ಕಾರ್ಯಕ್ರಮದ ರೂಪುರೇಶೆಗಳನ್ನು ಸಿದ್ಧಪಡಿಸಲು ರಚಿಸಲಾಗುವ ವಿವಿಧ ಸಮಿತಿಗಳು ಯಾವುದೇ ಲೋಪ ಬಾರದಂತೆ ವಹಿಸಿರುವ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಡೆಸಲು ತಿಳಿಸಿದರು.

ಇದನ್ನೂ ಓದಿ:-ಹನೂರು | ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಮಕ್ಕಳು ಸಾವು

ಮನೋರಂಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಬಗ್ಗೆ ಯಾವುದೇ ವ್ಯತಿರಿಕ್ತವಾಗದಂತೆ ಕ್ರಮವಹಿಸಬೇಕು. ವೇದಿಕೆ ಬಳಿ ವಿವಿಧ ಇಲಾಖೆಗಳಿಂದ ಮಳಿಗೆ ನಿರ್ಮಾಣ ಮಾಡಿ ಸ್ಥಳೀಯ ಉತ್ಪನ್ನಗಳ ಮಾರಾಟಕ್ಕೆ ಅಗತ್ಯ ಕ್ರಮವಹಿಸಬೇಕು. ಬನ್ನಿಮಂಟಪ ಹಾಗೂ ವೇದಿಕೆ ನಿರ್ಮಾಣದಲ್ಲಿ ಶುಚಿತ್ವದಲ್ಲಿ ರಾಜಿಯಿಲ್ಲದಂತೆ ಕ್ರಮವಹಿಸಬೇಕು. ಶ್ರೀರಂಗಪಟ್ಟಣ ದಸರಾ ಆನೆಗಳನ್ನು ವ್ಯವಸ್ಥಿತವಾಗಿ ಸ್ವಾಗತಿಸುವ ಕುರಿತು ಸೂಚನೆಗಳನ್ನು ನೀಡಿದರು. ಹಾಗೂ ದಸರಾ ಆನೆಗಳು ಆಗಮಿಸಿದ ನಂತರ ಪೂಜಾ ಕಾರ್ಯಕ್ರಮಗಳಲ್ಲಿ ಎಲ್ಲಾ ಅಧಿಕಾರಿಗಳೊಂದಿಗೆ ಪಾಲ್ಗೊಂಡರು.

ಶ್ರೀರಂಗಪಟ್ಟಣ ದಸರಾ ಉತ್ಸವ-೨೦೨೫ ಅನ್ನು ಯಾವುದೇ ಲೋಪ ಬಾರದಂತೆ ನಿರ್ವಹಣೆ ಮಾಡಲು ತಿಳಿಸಿದರು.

ಶ್ರೀರಂಗಪಟ್ಟಣಕ್ಕೆ ದಸರಾ ಆನೆಗಳು ಆಗಮಿಸಿದ ಬಳಿಕ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂದೆ ಜಿಲ್ಲಾಽಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತಿತರ ಅಧಿಕಾರಿಗಳು ಆನೆಗಳನ್ನು ಸ್ವಾಗತಿಸಿ ಪೂಜೆ ಸಲ್ಲಿಸಿದರು. ನಾಳೆ ಅಧಿಕೃತವಾಗಿ ಶ್ರೀರಂಗಪಟ್ಟಣ ದಸರೆಗೆ ಚಾಲನೆ ಸಿಗಲಿದೆ.

ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಽಕಾರಿ ಡಾ.ಕುಮಾರ ಹಾಗೂ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಶ್ರೀರಂಗಪಟ್ಟಣ ದಸರಾ ನಡೆಯುವ ಶ್ರೀರಂಗವೇದಿಕೆ ಹಾಗೂ ಕಿರಂಗೂರು ಬನ್ನಿಮಂಟಪದ ಬಳಿ ಸ್ಥಳ ಪರಿಶೀಲನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

37 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

1 hour ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

1 hour ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

5 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago