ಮದ್ದೂರು : ರಾಜ್ಯದೆಲ್ಲೆಡೆ ವಿಶಿಷ್ಟ ಆಚರಣೆಯಲ್ಲಿ ಮನೆ ಮಾತಾಗಿರುವ ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ ತಿಮ್ಮಪ್ಪನ ಹರಿಸೇವೆ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಐತಿಹಾಸಿಕ ಹಿನ್ನೆಲೆಯ ತೋಪಿನ ತಿಮ್ಮಪ್ಪನ ಹರಿಸೇವೆ ಉತ್ಸವದ ಪ್ರಯುಕ್ತ ಬರುವಂತಹ ಭಕ್ತರಿಗೆ ಸಂಪ್ರದಾಯದಂತೆ ತಾವರೆ ಎಲೆ ಪ್ರಸಾದ ವಿತರಿಸಲಾಯಿತು. ತಾವರೆ ಎಲೆ ಶ್ರೀತೋಪಿನ ತಿಮ್ಮಪ್ಪನ ದೇವರ ಪತ್ನಿ ಲಕ್ಷ್ಮೀ ದೇವಿಗೆ ಪ್ರಿಯವಾಗಿರುವ ಕಾರಣ ಪ್ರತಿವರ್ಷವು ಕೂಡ ಈ ದೇವಸ್ಥಾನದಲ್ಲಿ ಉತ್ಸವದ ಪ್ರಯುಕ್ತ ಭಕ್ತರಿಗೆ ವಿಶೇಷ ತಾವರೆ ಎಲೆ ಊಟ ನೀಡಲಾಗುತ್ತದೆ.
ಮಂಡ್ಯ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಹರಿಸೇವೆ ಉತ್ಸವಕ್ಕೆ ಬಂದು ತಿಮ್ಮಪ್ಪನ ದರ್ಶನ ಪಡೆದು ಬಳಿಕ ತಾವರೆ ಎಲೆಯಲ್ಲಿ ಪ್ರಸಾದ ಸ್ವೀಕರಿಸಿದರು. ಇನ್ನು ಉತ್ಸವದ ಪ್ರಯುಕ್ತ ದೇವಸ್ಥಾನದ ಆವರಣ ಹಾಗೂ ತಿಮ್ಮಪ್ಪನ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…