ಮದ್ದೂರು : ರಾಜ್ಯದೆಲ್ಲೆಡೆ ವಿಶಿಷ್ಟ ಆಚರಣೆಯಲ್ಲಿ ಮನೆ ಮಾತಾಗಿರುವ ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ ತಿಮ್ಮಪ್ಪನ ಹರಿಸೇವೆ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಐತಿಹಾಸಿಕ ಹಿನ್ನೆಲೆಯ ತೋಪಿನ ತಿಮ್ಮಪ್ಪನ ಹರಿಸೇವೆ ಉತ್ಸವದ ಪ್ರಯುಕ್ತ ಬರುವಂತಹ ಭಕ್ತರಿಗೆ ಸಂಪ್ರದಾಯದಂತೆ ತಾವರೆ ಎಲೆ ಪ್ರಸಾದ ವಿತರಿಸಲಾಯಿತು. ತಾವರೆ ಎಲೆ ಶ್ರೀತೋಪಿನ ತಿಮ್ಮಪ್ಪನ ದೇವರ ಪತ್ನಿ ಲಕ್ಷ್ಮೀ ದೇವಿಗೆ ಪ್ರಿಯವಾಗಿರುವ ಕಾರಣ ಪ್ರತಿವರ್ಷವು ಕೂಡ ಈ ದೇವಸ್ಥಾನದಲ್ಲಿ ಉತ್ಸವದ ಪ್ರಯುಕ್ತ ಭಕ್ತರಿಗೆ ವಿಶೇಷ ತಾವರೆ ಎಲೆ ಊಟ ನೀಡಲಾಗುತ್ತದೆ.
ಮಂಡ್ಯ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಹರಿಸೇವೆ ಉತ್ಸವಕ್ಕೆ ಬಂದು ತಿಮ್ಮಪ್ಪನ ದರ್ಶನ ಪಡೆದು ಬಳಿಕ ತಾವರೆ ಎಲೆಯಲ್ಲಿ ಪ್ರಸಾದ ಸ್ವೀಕರಿಸಿದರು. ಇನ್ನು ಉತ್ಸವದ ಪ್ರಯುಕ್ತ ದೇವಸ್ಥಾನದ ಆವರಣ ಹಾಗೂ ತಿಮ್ಮಪ್ಪನ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…