ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ ನಿರ್ಧಾರಕ್ಕೆ ಸ್ಥಳೀಯ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಈ ಎರಡು ತಾಣಗಳಲ್ಲಿ ನಡೆದ ಸಾವು-ನೋವುಗಳ ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಬಲಮುರಿ ಮತ್ತು ಎಡಮುರಿ ಕಾವೇರಿ ನದಿಯ ತೀರದಲ್ಲಿ ಇರುವ ಜನಪ್ರಿಯ ಪ್ರವಾಸಿ ಸ್ಥಳಗಳಾಗಿವೆ. ಬೇಸಿಗೆಯಲ್ಲಿ ವಿಶೇಷವಾಗಿ ಯುವಕರು, ಕುಟುಂಬಗಳು ಮತ್ತು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿ ನಡೆದ ದುರಂತಗಳು (ಸಾವು ನೋವುಗಳು) ಆತಂಕವುಂಟುಮಾಡಿದ್ದು, ಪರಿಣಾಮ ಪರಿಣಾಮ ನಿರ್ಬಂಧ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.
ವ್ಯಾಪಾರಿಗಳ ಆಕ್ರೋಶ
ಸ್ಥಳೀಯ ವ್ಯಾಪಾರಿಗಳು ಮತ್ತು ಪ್ರವಾಸೋದ್ಯಮ ಆಧಾರಿತ ವ್ಯವಹಾರ ಮಾಡುವವರು ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ಪ್ರವಾಸಿಗರಿಗೆ ಸುರಕ್ಷಿತ ಪ್ರವೇಶ ಕಲ್ಪಿಸಿ, ಸಾವು-ನೋವುಗಳು ಆಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬಹುದಿತ್ತು. ಬದಲಿಗೆ ನೇರವಾಗಿ ನಿಷೇಧ ಹೇರಿರುವುದು ಸರಿಯಲ್ಲ ಎಂದು ಸ್ಥಳೀಯ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ.
ಈ ತಾಣಗಳಿಗೆ ಬರುವ ಪ್ರವಾಸಿಗರ ಮೇಲೆ ಅವಲಂಬಿತವಾಗಿರುವ ಚಿಕ್ಕ-ಚಿಕ್ಕ ಅಂಗಡಿಗಳು, ತಿಂಡಿ-ತಿನಿಸು ಮಾರಾಟಗಾರರು, ಬೋಟಿಂಗ್, ಫೋಟೋಗ್ರಫಿ ಮತ್ತು ಇತರ ಸಣ್ಣ ವ್ಯಾಪಾರಿಗಳಿಗೆ ಈ ನಿರ್ಬಂಧ ದೊಡ್ಡ ಹೊಡೆತವಾಗಿದೆ. ಬೇಸಿಗೆ ರಜೆಯ ಸಮಯದಲ್ಲಿ ಉತ್ತಮ ಆದಾಯ ಪಡೆಯುವ ಅವಕಾಶ ಕಳೆದುಕೊಂಡಿದ್ದೇವೆ ಎಂದು ಸ್ಥಳೀಯ ವ್ಯಾಪಾರಿಗಳು ತಮ್ಮ ಅಳಲನ್ನು ತೊಡಿಕೊಂಡರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…