ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ ನಿರ್ಧಾರಕ್ಕೆ ಸ್ಥಳೀಯ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಈ ಎರಡು ತಾಣಗಳಲ್ಲಿ ನಡೆದ ಸಾವು-ನೋವುಗಳ ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಬಲಮುರಿ ಮತ್ತು ಎಡಮುರಿ ಕಾವೇರಿ ನದಿಯ ತೀರದಲ್ಲಿ ಇರುವ ಜನಪ್ರಿಯ ಪ್ರವಾಸಿ ಸ್ಥಳಗಳಾಗಿವೆ. ಬೇಸಿಗೆಯಲ್ಲಿ ವಿಶೇಷವಾಗಿ ಯುವಕರು, ಕುಟುಂಬಗಳು ಮತ್ತು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿ ನಡೆದ ದುರಂತಗಳು (ಸಾವು ನೋವುಗಳು) ಆತಂಕವುಂಟುಮಾಡಿದ್ದು, ಪರಿಣಾಮ ಪರಿಣಾಮ ನಿರ್ಬಂಧ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.
ವ್ಯಾಪಾರಿಗಳ ಆಕ್ರೋಶ
ಸ್ಥಳೀಯ ವ್ಯಾಪಾರಿಗಳು ಮತ್ತು ಪ್ರವಾಸೋದ್ಯಮ ಆಧಾರಿತ ವ್ಯವಹಾರ ಮಾಡುವವರು ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ಪ್ರವಾಸಿಗರಿಗೆ ಸುರಕ್ಷಿತ ಪ್ರವೇಶ ಕಲ್ಪಿಸಿ, ಸಾವು-ನೋವುಗಳು ಆಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬಹುದಿತ್ತು. ಬದಲಿಗೆ ನೇರವಾಗಿ ನಿಷೇಧ ಹೇರಿರುವುದು ಸರಿಯಲ್ಲ ಎಂದು ಸ್ಥಳೀಯ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ.
ಈ ತಾಣಗಳಿಗೆ ಬರುವ ಪ್ರವಾಸಿಗರ ಮೇಲೆ ಅವಲಂಬಿತವಾಗಿರುವ ಚಿಕ್ಕ-ಚಿಕ್ಕ ಅಂಗಡಿಗಳು, ತಿಂಡಿ-ತಿನಿಸು ಮಾರಾಟಗಾರರು, ಬೋಟಿಂಗ್, ಫೋಟೋಗ್ರಫಿ ಮತ್ತು ಇತರ ಸಣ್ಣ ವ್ಯಾಪಾರಿಗಳಿಗೆ ಈ ನಿರ್ಬಂಧ ದೊಡ್ಡ ಹೊಡೆತವಾಗಿದೆ. ಬೇಸಿಗೆ ರಜೆಯ ಸಮಯದಲ್ಲಿ ಉತ್ತಮ ಆದಾಯ ಪಡೆಯುವ ಅವಕಾಶ ಕಳೆದುಕೊಂಡಿದ್ದೇವೆ ಎಂದು ಸ್ಥಳೀಯ ವ್ಯಾಪಾರಿಗಳು ತಮ್ಮ ಅಳಲನ್ನು ತೊಡಿಕೊಂಡರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…