ಮಂಡ್ಯ

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧ ನಿರ್ಧಾರಕ್ಕೆ ಸ್ಥಳೀಯ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಈ ಎರಡು ತಾಣಗಳಲ್ಲಿ ನಡೆದ ಸಾವು-ನೋವುಗಳ ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಬಲಮುರಿ ಮತ್ತು ಎಡಮುರಿ ಕಾವೇರಿ ನದಿಯ ತೀರದಲ್ಲಿ ಇರುವ ಜನಪ್ರಿಯ ಪ್ರವಾಸಿ ಸ್ಥಳಗಳಾಗಿವೆ. ಬೇಸಿಗೆಯಲ್ಲಿ ವಿಶೇಷವಾಗಿ ಯುವಕರು, ಕುಟುಂಬಗಳು ಮತ್ತು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿ ನಡೆದ ದುರಂತಗಳು (ಸಾವು ನೋವುಗಳು) ಆತಂಕವುಂಟುಮಾಡಿದ್ದು, ಪರಿಣಾಮ ಪರಿಣಾಮ ನಿರ್ಬಂಧ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.

ವ್ಯಾಪಾರಿಗಳ ಆಕ್ರೋಶ
ಸ್ಥಳೀಯ ವ್ಯಾಪಾರಿಗಳು ಮತ್ತು ಪ್ರವಾಸೋದ್ಯಮ ಆಧಾರಿತ ವ್ಯವಹಾರ ಮಾಡುವವರು ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದ್ದಾರೆ. “ಪ್ರವಾಸಿಗರಿಗೆ ಸುರಕ್ಷಿತ ಪ್ರವೇಶ ಕಲ್ಪಿಸಿ, ಸಾವು-ನೋವುಗಳು ಆಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬಹುದಿತ್ತು. ಬದಲಿಗೆ ನೇರವಾಗಿ ನಿಷೇಧ ಹೇರಿರುವುದು ಸರಿಯಲ್ಲ ಎಂದು ಸ್ಥಳೀಯ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ.

ಈ ತಾಣಗಳಿಗೆ ಬರುವ ಪ್ರವಾಸಿಗರ ಮೇಲೆ ಅವಲಂಬಿತವಾಗಿರುವ ಚಿಕ್ಕ-ಚಿಕ್ಕ ಅಂಗಡಿಗಳು, ತಿಂಡಿ-ತಿನಿಸು ಮಾರಾಟಗಾರರು, ಬೋಟಿಂಗ್, ಫೋಟೋಗ್ರಫಿ ಮತ್ತು ಇತರ ಸಣ್ಣ ವ್ಯಾಪಾರಿಗಳಿಗೆ ಈ ನಿರ್ಬಂಧ ದೊಡ್ಡ ಹೊಡೆತವಾಗಿದೆ. ಬೇಸಿಗೆ ರಜೆಯ ಸಮಯದಲ್ಲಿ ಉತ್ತಮ ಆದಾಯ ಪಡೆಯುವ ಅವಕಾಶ ಕಳೆದುಕೊಂಡಿದ್ದೇವೆ ಎಂದು ಸ್ಥಳೀಯ ವ್ಯಾಪಾರಿಗಳು ತಮ್ಮ ಅಳಲನ್ನು ತೊಡಿಕೊಂಡರು.

ಆಂದೋಲನ ಡೆಸ್ಕ್

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

3 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

3 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

4 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

13 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

14 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

14 hours ago