ಮಂಡ್ಯ

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರಿಗೆ ಸೂಚಿಸಿದರು.

ಮೇಲುಕೋಟೆಯಲ್ಲಿ ಕಾರ್ಯಕ್ರಮಕ್ಕೆ ಬರುತ್ತಿದ್ದ ವೇಳೆ ದೇವಾಲಯದ ಸುತ್ತಮುತ್ತ ಉಂಟಾಗಿದ್ದ ಟ್ರಾಫಿಕ್ ಜಾಮ್ ನಿಂದಾಗಿ ಶಾಸಕರು ಕಾರನ್ನು ಅಲ್ಲೇ ಬಿಟ್ಟು ದ್ವಿಚಕ್ರವಾಹನದಲ್ಲಿ ಸಮಾರಂಭಕ್ಕೆ ಆಗಮಿಸಿದರು. ದೇವಾಲಯದ ಸುತ್ತಮುತ್ತ ಉಂಟಾಗಿದ್ದ ವಾಹನ ದಟ್ಟಣೆಯನ್ನು ಗಮನಿಸಿದ ಶಾಸಕರು ಇನ್ನು ಮುಂದೆ ಶನಿವಾರ ಭಾನುವಾರ ಮತ್ತು ರಜಾದಿನಗಳಂದು ಭಕ್ತರ ವಾಹನದಟ್ಟಣೆಯನ್ನು ನಿಯಂತ್ರಿಸಲು ಪ್ರಾಥಮಿಕ ಆರೋಗ್ಯಕೇಂದ್ರದ ಮುಂಭಾಗ ಪಾರ್ಕಿಂಗ್ ಸೌಲಭ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಮೇಲುಕೋಟೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಎಸ್‌ಪಿ ಅವರಿಗೆ ಖಡಕ್ ಸೂಚನೆ ನೀಡಿದರು.

ಮಾರ್ಚ್‌ 23ರಿಂದ ವೈರಮುಡಿ ಬ್ರಹ್ಮೋತ್ಸವ
ಮಾರ್ಚ್ 23ರಿಂದ ಏ-4 ರವರೆಗೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು ನಿತ್ಯ ವಿಶೇಷ ಉತ್ಸವಗಳು ನೆರವೇರುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಉತ್ಸವಕ್ಕೆ ಅಡಚಣೆಯಾಗುತ್ತದೆ. ಹಾಗಾಗಿ ಜಾತ್ರೆಯ ಅವಧಿಯಲ್ಲಿ ಉತ್ಸವ ಬೀದಿಗಳಲ್ಲಿ ವಾಹನಗಳು ನಿಲುಗಡೆಯಾಗದಂತೆ ಪೊಲೀಸರು ಕ್ರಮ ವಹಿಸಬೇಕು. ಗ್ರಾಮಪಂಚಾಯಿತಿ ಕೂಡ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದರಲ್ಲದೆ, ಪಾಂಡವಪುರ ಸರ್ಕಲ್ ಇನ್ಸ್‌ಪೆಕ್ಟರ್ ಶರತ್, ಶ್ರೀರಂಗ ಪಟ್ಟಣ ಡಿವೈಎಸ್‌ಪಿ ಹಾಗೂ ಮೇಲುಕೋಟೆ ಪೊಲೀಸರಿಗೂ ಶಾಸಕರು ಸೂಚನೆ ನೀಡಿದರು. ದೇವಾಲಯ, ಕಲ್ಯಾಣಿ , ಯೋಗಾನರಸಿಂಹಸ್ವಾಮಿ ಬೆಟ್ಟ, ರಾಯಗೋಪುರದ ಬಳಿ ರಜಾದಿನಗಳಲ್ಲಿ ವಾಹನದಟ್ಟಣೆ ಉಂಟಾಗಿ ಘರ್ಷಣೆಗೂ ಕಾರಣವಾಗುತ್ತದೆ ಎಂದು ಶಾಸಕರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

3 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

19 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

20 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

21 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago