ಮಂಡ್ಯ

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಅವರಿಗೆ ಸೂಚಿಸಿದರು.

ಮೇಲುಕೋಟೆಯಲ್ಲಿ ಕಾರ್ಯಕ್ರಮಕ್ಕೆ ಬರುತ್ತಿದ್ದ ವೇಳೆ ದೇವಾಲಯದ ಸುತ್ತಮುತ್ತ ಉಂಟಾಗಿದ್ದ ಟ್ರಾಫಿಕ್ ಜಾಮ್ ನಿಂದಾಗಿ ಶಾಸಕರು ಕಾರನ್ನು ಅಲ್ಲೇ ಬಿಟ್ಟು ದ್ವಿಚಕ್ರವಾಹನದಲ್ಲಿ ಸಮಾರಂಭಕ್ಕೆ ಆಗಮಿಸಿದರು. ದೇವಾಲಯದ ಸುತ್ತಮುತ್ತ ಉಂಟಾಗಿದ್ದ ವಾಹನ ದಟ್ಟಣೆಯನ್ನು ಗಮನಿಸಿದ ಶಾಸಕರು ಇನ್ನು ಮುಂದೆ ಶನಿವಾರ ಭಾನುವಾರ ಮತ್ತು ರಜಾದಿನಗಳಂದು ಭಕ್ತರ ವಾಹನದಟ್ಟಣೆಯನ್ನು ನಿಯಂತ್ರಿಸಲು ಪ್ರಾಥಮಿಕ ಆರೋಗ್ಯಕೇಂದ್ರದ ಮುಂಭಾಗ ಪಾರ್ಕಿಂಗ್ ಸೌಲಭ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಮೇಲುಕೋಟೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಎಸ್‌ಪಿ ಅವರಿಗೆ ಖಡಕ್ ಸೂಚನೆ ನೀಡಿದರು.

ಮಾರ್ಚ್‌ 23ರಿಂದ ವೈರಮುಡಿ ಬ್ರಹ್ಮೋತ್ಸವ
ಮಾರ್ಚ್ 23ರಿಂದ ಏ-4 ರವರೆಗೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು ನಿತ್ಯ ವಿಶೇಷ ಉತ್ಸವಗಳು ನೆರವೇರುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಉತ್ಸವಕ್ಕೆ ಅಡಚಣೆಯಾಗುತ್ತದೆ. ಹಾಗಾಗಿ ಜಾತ್ರೆಯ ಅವಧಿಯಲ್ಲಿ ಉತ್ಸವ ಬೀದಿಗಳಲ್ಲಿ ವಾಹನಗಳು ನಿಲುಗಡೆಯಾಗದಂತೆ ಪೊಲೀಸರು ಕ್ರಮ ವಹಿಸಬೇಕು. ಗ್ರಾಮಪಂಚಾಯಿತಿ ಕೂಡ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದರಲ್ಲದೆ, ಪಾಂಡವಪುರ ಸರ್ಕಲ್ ಇನ್ಸ್‌ಪೆಕ್ಟರ್ ಶರತ್, ಶ್ರೀರಂಗ ಪಟ್ಟಣ ಡಿವೈಎಸ್‌ಪಿ ಹಾಗೂ ಮೇಲುಕೋಟೆ ಪೊಲೀಸರಿಗೂ ಶಾಸಕರು ಸೂಚನೆ ನೀಡಿದರು. ದೇವಾಲಯ, ಕಲ್ಯಾಣಿ , ಯೋಗಾನರಸಿಂಹಸ್ವಾಮಿ ಬೆಟ್ಟ, ರಾಯಗೋಪುರದ ಬಳಿ ರಜಾದಿನಗಳಲ್ಲಿ ವಾಹನದಟ್ಟಣೆ ಉಂಟಾಗಿ ಘರ್ಷಣೆಗೂ ಕಾರಣವಾಗುತ್ತದೆ ಎಂದು ಶಾಸಕರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

5 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

5 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

8 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

8 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

8 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

8 hours ago