ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಬ್ಯಾಡರಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್ ಅವರು ಕೃಷಿ ಕೆಲಸಕ್ಕಾಗಿ ಎತ್ತುಗಳನ್ನು ಅಣ್ಣಹಳ್ಳಿ ಗ್ರಾಮದಿಂದ ಕರೆತರುತ್ತಿದ್ದ ಸಂದರ್ಭದಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಳವಳ್ಳಿ ಕಡೆಯಿಂದ ಹಲಗೂರು ಕಡೆಗೆ ಹೋಗುತ್ತಿದ್ದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎತ್ತು ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ನಂತರ ಬಸ್ ಚಾಲಕ ಬಸ್ ಸಮೇತ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ರಸ್ತೆ ತಡೆದು ಪ್ರತಿಭಟನೆ
ಅಪಘಾತದ ಸುದ್ದಿ ತಿಳಿದ ಸಾರ್ವಜನಿಕರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…