ಮಂಡ್ಯ

ತುಂಗಭದ್ರಾ ಡ್ಯಾಂ ಗೇಟ್‌ ಕಟ್‌: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಿಯಾಕ್ಷನ್‌

ಮಂಡ್ಯ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ ಗೇಟ್‌ ಮುರಿದು ಹೋಗಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯದಲ್ಲಿ ಗದ್ದೆಯಲ್ಲಿ ನಾಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ರಭಸಕ್ಕೆ ಗೇಟ್‌ ಕೊಚ್ಚಿಕೊಂಡು ಹೋಗಿದ್ದು, ನದಿಗೆ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರೈತರಿಗೆ ಭಾರೀ ಆತಂಕ ಮನೆಮಾಡಿದೆ.

ಜಲಾಶಯಕ್ಕೆ ಸಾಫ್ಟ್‌ ಲಾಕ್‌ ಅಳವಡಿಸದ ಹಿನ್ನೆಲೆಯಲ್ಲಿ ಈ ಅವಘಡ ಆಗಿದೆ. ಸುಮಾರು 70 ವರ್ಷಗಳ ಹಿಂದೆ ಈ ಡ್ಯಾಂನ್ನು ನಿರ್ಮಾಣ ಮಾಡಲಾಗಿದೆ. ಆದರೆ ಡ್ಯಾಂಗೆ ಸ್ಟಾಫ್ ಲಾಕ್‌ ಗೇಟ್‌ ಅಳವಡಿಸದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎಂದರು.

ಸಾಫ್ಟ್ ಲಾಕ್‌ ಗೇಟ್‌ ಅಳವಡಿಸಿದರೆ ಮಾತ್ರ ಇಂತಹ ಅವಘಡಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೆಆರ್‌ಎಸ್‌ ಡ್ಯಾಂಗೂ ಸಾಫ್ಟ್ ಲಾಕ್‌ ಗೇಟ್‌ ಇಲ್ಲ. ತುಂಗಭದ್ರಾ ಡ್ಯಾಂ ಅವಘಡ ನೋಡಿದರೆ ಮುಂದೆ ಹೆಚ್ಚಿನ ಅನಾಹುತ ಆಗುವುದಕ್ಕೂ ಮುನ್ನೆ ಕೆಆರ್‌ಎಸ್‌ಗೆ ಸಾಫ್ಟ್ ಲಾಕ್‌ ಅಳವಡಿಕೆ ಮಾಡಬೇಕು ಎಂದು ಆಗ್ರಹಿಸಿದರು.

ತುಂಗಭದ್ರಾ ಡ್ಯಾಂ ಸಮಸ್ಯೆಗೆ ಸರ್ಕಾರ ನಿರ್ಲಕ್ಷ್ಯ ಎನ್ನಲು ಆಗಲ್ಲ. ಅಧಿಕಾರಿಗಳು ಪದೇ ಪದೇ ಡ್ಯಾಂನ್ನು ಪರಿಶೀಲನೆ ಮಾಡಬೇಕಿತ್ತು. ಆದರೆ ಅವರು ಕಾಟಾಚಾರಕ್ಕೆ ಪರಿಶೀಲನೆ ನಡೆಸಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

4 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

6 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

8 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

8 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

8 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

8 hours ago