ಮಂಡ್ಯ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಮುರಿದು ಹೋಗಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯದಲ್ಲಿ ಗದ್ದೆಯಲ್ಲಿ ನಾಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ರಭಸಕ್ಕೆ ಗೇಟ್ ಕೊಚ್ಚಿಕೊಂಡು ಹೋಗಿದ್ದು, ನದಿಗೆ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ರೈತರಿಗೆ ಭಾರೀ ಆತಂಕ ಮನೆಮಾಡಿದೆ.
ಜಲಾಶಯಕ್ಕೆ ಸಾಫ್ಟ್ ಲಾಕ್ ಅಳವಡಿಸದ ಹಿನ್ನೆಲೆಯಲ್ಲಿ ಈ ಅವಘಡ ಆಗಿದೆ. ಸುಮಾರು 70 ವರ್ಷಗಳ ಹಿಂದೆ ಈ ಡ್ಯಾಂನ್ನು ನಿರ್ಮಾಣ ಮಾಡಲಾಗಿದೆ. ಆದರೆ ಡ್ಯಾಂಗೆ ಸ್ಟಾಫ್ ಲಾಕ್ ಗೇಟ್ ಅಳವಡಿಸದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ ಎಂದರು.
ಸಾಫ್ಟ್ ಲಾಕ್ ಗೇಟ್ ಅಳವಡಿಸಿದರೆ ಮಾತ್ರ ಇಂತಹ ಅವಘಡಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೆಆರ್ಎಸ್ ಡ್ಯಾಂಗೂ ಸಾಫ್ಟ್ ಲಾಕ್ ಗೇಟ್ ಇಲ್ಲ. ತುಂಗಭದ್ರಾ ಡ್ಯಾಂ ಅವಘಡ ನೋಡಿದರೆ ಮುಂದೆ ಹೆಚ್ಚಿನ ಅನಾಹುತ ಆಗುವುದಕ್ಕೂ ಮುನ್ನೆ ಕೆಆರ್ಎಸ್ಗೆ ಸಾಫ್ಟ್ ಲಾಕ್ ಅಳವಡಿಕೆ ಮಾಡಬೇಕು ಎಂದು ಆಗ್ರಹಿಸಿದರು.
ತುಂಗಭದ್ರಾ ಡ್ಯಾಂ ಸಮಸ್ಯೆಗೆ ಸರ್ಕಾರ ನಿರ್ಲಕ್ಷ್ಯ ಎನ್ನಲು ಆಗಲ್ಲ. ಅಧಿಕಾರಿಗಳು ಪದೇ ಪದೇ ಡ್ಯಾಂನ್ನು ಪರಿಶೀಲನೆ ಮಾಡಬೇಕಿತ್ತು. ಆದರೆ ಅವರು ಕಾಟಾಚಾರಕ್ಕೆ ಪರಿಶೀಲನೆ ನಡೆಸಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…