ಮಂಡ್ಯ

ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮದ್ದೂರು : ಪಟ್ಟಣದ ಎಳೆನೀರು ಮಾರುಕಟ್ಟೆ ಬಳಿ ಹಾಲಿನ ಟ್ಯಾಂಕರ್ ಬೈಕ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಪ್ರಕರಣದಲ್ಲಿ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

ಕೆ.ಆರ್.ಪೇಟೆ ತಾಲ್ಲೂಕಿನ ಗೊಲ್ಲರಕೊಪ್ಪಲು ಗ್ರಾಮದ ದೀಪಕ್(೨೧) ಎಂಬವರು ಸೋಮನಹಳ್ಳಿ ಎಸ್.ಸಿ.ಎಂ.ಎಂ. ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಕ್ರೀಡೆಗೆ ಬೈಕ್‌ನಲ್ಲಿ ತನ್ನ ಸಹೋದರಿಯನ್ನು ಬಿಟ್ಟು, ಮಂಡ್ಯ ಕಡೆಗೆ ಹಿಂದಿರುಗುತ್ತಿದ್ದಾಗ ಎಳೆನೀರು ಮಾರುಕಟ್ಟೆ ಬಳಿ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆಗೆ ಸ್ಕೂಟರ್ ಡಿಕ್ಕಿ; ಸವಾರ ಸಾವು:
ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸೇತುವೆಗೆ ಹಾಕಿದ್ದ ಸರಳು ಚುಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲ್ಲೂಕಿನ ಬೆಟ್ಟದಾಸನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕೆಸ್ತೂರು ಗ್ರಾಮದ ರಾಮು (೫೦) ಮೃತಪಟ್ಟವರು. ಬೆಟ್ಟದಾಸನದೊಡ್ಡಿ ರಸ್ತೆಯಲ್ಲಿ ಕಿರುಸೇತುವೆ ನಿರ್ಮಿಸುತ್ತಿದ್ದು, ಸ್ಕೂಟರ್‌ನಲ್ಲಿ ಬರುತ್ತಿದ್ದ ರಾಮು ಅವರು ಸ್ಕೂಟರ್ ಸಮೇತ ಸೇತುವೆ ಒಳಗೆ ಬಿದ್ದಿದ್ದು, ಸರಳು ದೇಹದೊಳಗೆ ನುಗ್ಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿಯಮಾನುಸಾರ ಕಾಮಗಾರಿ ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಕಾಮಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಆದರೆ, ಇದ್ಯಾವುದನ್ನು ಲೋಕೋಪಯೋಗಿ ಇಲಾಖೆ ಅಽಕಾರಿಗಳು ಮಾಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago