accident (1)
ಮದ್ದೂರು : ಪಟ್ಟಣದ ಎಳೆನೀರು ಮಾರುಕಟ್ಟೆ ಬಳಿ ಹಾಲಿನ ಟ್ಯಾಂಕರ್ ಬೈಕ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಪ್ರಕರಣದಲ್ಲಿ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಗೊಲ್ಲರಕೊಪ್ಪಲು ಗ್ರಾಮದ ದೀಪಕ್(೨೧) ಎಂಬವರು ಸೋಮನಹಳ್ಳಿ ಎಸ್.ಸಿ.ಎಂ.ಎಂ. ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಕ್ರೀಡೆಗೆ ಬೈಕ್ನಲ್ಲಿ ತನ್ನ ಸಹೋದರಿಯನ್ನು ಬಿಟ್ಟು, ಮಂಡ್ಯ ಕಡೆಗೆ ಹಿಂದಿರುಗುತ್ತಿದ್ದಾಗ ಎಳೆನೀರು ಮಾರುಕಟ್ಟೆ ಬಳಿ ಟ್ಯಾಂಕರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೇತುವೆಗೆ ಸ್ಕೂಟರ್ ಡಿಕ್ಕಿ; ಸವಾರ ಸಾವು:
ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುತ್ತಿರುವ ಕಿರು ಸೇತುವೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸೇತುವೆಗೆ ಹಾಕಿದ್ದ ಸರಳು ಚುಚ್ಚಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮದ್ದೂರು ತಾಲ್ಲೂಕಿನ ಬೆಟ್ಟದಾಸನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೆಸ್ತೂರು ಗ್ರಾಮದ ರಾಮು (೫೦) ಮೃತಪಟ್ಟವರು. ಬೆಟ್ಟದಾಸನದೊಡ್ಡಿ ರಸ್ತೆಯಲ್ಲಿ ಕಿರುಸೇತುವೆ ನಿರ್ಮಿಸುತ್ತಿದ್ದು, ಸ್ಕೂಟರ್ನಲ್ಲಿ ಬರುತ್ತಿದ್ದ ರಾಮು ಅವರು ಸ್ಕೂಟರ್ ಸಮೇತ ಸೇತುವೆ ಒಳಗೆ ಬಿದ್ದಿದ್ದು, ಸರಳು ದೇಹದೊಳಗೆ ನುಗ್ಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಿಯಮಾನುಸಾರ ಕಾಮಗಾರಿ ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಕಾಮಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಆದರೆ, ಇದ್ಯಾವುದನ್ನು ಲೋಕೋಪಯೋಗಿ ಇಲಾಖೆ ಅಽಕಾರಿಗಳು ಮಾಡದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.
ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…