ಮಂಡ್ಯ: ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು, ಸ್ನಾನ ಮಾಡಲು ಹೋಗಿ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ(19), ನದಿಯಾ(23) ಮೃತ ದುರ್ದೈವಿಗಳು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನಕ್ಕೆಂದು ಇಳಿದಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





