ಮಳವಳ್ಳಿ : ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ಜರುಗಿದೆ.
ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು ಮಾರ್ಗದಲ್ಲಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಕೂಲಿಕಾರರು ಸಾವನ್ನಪ್ಪಿದ್ದಾರೆ.
ಬನ್ನೂರಿನ ವಾಸಿಂ 25 ವರ್ಷ ಸನಿಯಾ 24 ವರ್ಷ ಮೃತಪಟ್ಟ ಕೂಲಿಕಾರರಾಗಿದ್ದಾರೆ. ಕಿರುಗಾವಲು ಬಾಸ್ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಹೋಗುವಾಗ ಈ ಘಟನೆ ಸಂಭವಿಸಿದೆ.
ಲಾರಿ ತುಂಬಿಕೊಂಡು ಹೋಗುತ್ತಿದ್ದ ಪಡಿತರ ಚೀಟಿಯ ಅಕ್ಕಿಯೋ ಅಥವಾ ರೈತರಿಂದ ಖರೀದಿಸಿದ ಭತ್ತದ ಅಕ್ಕಿಯೋ ಎಂಬುದು ಎಂಬುದು ಪೊಲೀಸ್ ತನಿಖೆ ಇಂದ ತಿಳಿಯಬೇಕಿದೆ.
ಈ ಸಂಬಂಧ ಕಿರುಗಾವಲು ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…