thieves arrested
ಮಂಡ್ಯ : ಮಂಡ್ಯ ನಗರ ಸೇರಿದಂತೆ ಇತರೆ ಕಡೆಗಳಲ್ಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಗೋಪಿಕೃಷ್ಣ ಅಲಿಯಾಸ್ ಗೋಪಿ, ಮದ್ದೂರು ತಾಲ್ಲೂಕು ಸೋಮನಹಳ್ಳಿ ಗ್ರಾಮದ ಎಸ್.ಕೆ. ಸುರೇಶ್ ಅಲಿಯಾಸ್ ಸೂರಿ ಬಂಧಿತ ಆರೋಪಿಗಳು.
ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖದೀಮರನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಇ.ತಿಮ್ಮಯ್ಯ, ಎಸ್.ಇ. ಗಂಗಾಧರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಮಂಡ್ಯ ಉಪವಿಭಾಗ ಡಿವೈಎಸ್ಪಿ ಎಚ್.ಲಕ್ಷ್ಮೀನಾರಾಯಣ ಪ್ರಸಾದ್ ನೇತೃತ್ವದಲ್ಲಿ ವೃತ್ತ ನಿರೀಕ್ಷಕ ನವೀನ್ ಸುಪೇಕರ್, ಪಿಎಸ್ಐ ಎಸ್.ಜಿ.ಶೇಷಾದ್ರಿ ಕುಮಾರ, ಅಪರಾಧ ವಿಭಾಗದ ಪಿಎಸ್ಐ ಬಿ.ಎಸ್. ವೆಂಕಟೇಶ್, ಸಿಬ್ಬಂದಿಗಳಾದ ಟಿ.ಲಿಂಗರಾಜು, ಉಮರ್ ಅಹಮದ್ ಫಾರೂಖಿ, ಅನಿಲ್ ಕುಮಾರ್, ಓಬೇದುಲ್ಲಾ ಖಾನ್, ದಕ್ಷಿಣ ಮೂರ್ತಿ, ಮಂಜುನಾಥ, ಪ್ರಭುಸ್ವಾಮಿ, ಕುಮಾರ್, ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯ ಮಹೇಶ್, ಕೃಷ್ಣ, ಲೋಕೇಶ್ ಹಾಗೂ ರವಿಕಿರಣ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿತ್ತು.
ಸದರಿ ತಂಡವು ಕಳೆದ ಜು.7ರಂದು ಆರೋಪಿಗಳಾದ ಗೋಪಿಕೃಷ್ಣ, ಎಸ್.ಕೆ. ಸುರೇಶ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿ ಮನೆ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಒಟ್ಟು 3 ಕಳ್ಳತನ ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಗಳಿಂದ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…