ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರೀಶ್ ಹಾಗೂ ಸುಷ್ಮಾ ದಂಪತಿಯ ಪುತ್ರ ವಿನು ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್ಗೆ ಬಿದ್ದು ಮೃತಪಟ್ಟಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




