ಮಂಡ್ಯ

ಮನ್`ಮುಲ್’ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್

ಮಂಡ್ಯ : ಗೆಜ್ಜಲಗೆರೆ ಮನ್`ಮುಲ್’ ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು.

ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು.

ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, ಮನ್’ಮುಲ್ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆದು ಶಕ್ತಿ ಮೀರಿ ಶ್ರಮಿಸುವುದಾಗಿ ಭರವಸೆ ನೀಡಿದರು‌.

ಒಕ್ಕೂಟದ ರೈತರ ಕ್ಷೇಮಾಭಿವೃದ್ಧಿ ನಿಧಿಯಿಂದ ಉತ್ಪಾದಕರ ಮಕ್ಕಳಿಗೆ ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆ ತೆರೆಯುವ ಅಲೋಚನೆ ಇದೆ ಎಂದರು.

ಇದನ್ನೂ ಓದಿ:- ಹೈಕಮಾಂಡ್‌ ಕರೆ: ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ

ಇದೇ ವೇಳೆ ನೂತನ ಅಧ್ಯಕ್ಷರನ್ನು ಒಕ್ಕೂಟದ ನಿರ್ದೇಶಕರು, ಅಧಿಕಾರಿಗಳು, ಬಂಧು ಮಿತ್ರರು ಅಭಿನಂದಿಸಿದರು.

ಈ ವೇಳೆ ಒಕ್ಕೂಟದ ನಿರ್ದೇಶಕರಾದ ಬೋರೇಗೌಡ, ಹರೀಶ್, ಸಾದೊಳಲು ಸ್ವಾಮಿ, ಶಿವಕುಮಾರ್, ಒಕ್ಕೂಟದ ಎಂ.ಡಿ.ಡಾ. ಮಂಜೇಶ್ ಸೇರಿದಂತೆ ಹಲವರು ಹಾಜರಿದ್ದರು‌.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago