ಮಂಡ್ಯ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧದ ಹೇಳಿಕೆ ಸಲುವಾಗಿ ಹಿಂದೂ ಕಾರ್ಯಕರ್ತರು ಮಂಡ್ಯದಲ್ಲಿ ದೂರು ನೀಡಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆಗೆ ಆರ್ಎಸ್ಎಸ್ ಕಾರ್ಯಕರ್ತರೇ ವೇಷ ಧರಿಸಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಆರೋಪಿಸಿ ಎಂ.ಲಕ್ಷ್ಮಣ್ ಅವರು ದೂರು ನೀಡಿದ್ದರು. ಈ ಹೇಳಿಕೆಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಕೆರೆಗೋಡು ಪೊಲೀಸ್ ಠಾಣೆಗೆ ಅವರ ವಿರುದ್ಧ ದೂರು ನೀಡಿದ್ದಾರೆ.
ಈ ದೂರನ್ನು ಹನುಮ ಧ್ವಜ ಸಮಿತಿ ಸದಸ್ಯರು ಸಲ್ಲಿಕೆ ಮಾಡಿದ್ದು, ದೇಶಭಕ್ತ ಆರ್ಎಸ್ಎಸ್ ಸಂಘಟನೆ ಮೇಲೆ ಸುಳ್ಳು ಆರೋಪದ ಹೇಳಿಕೆ ನೀಡಿದ್ದಾರೆ. ಹೀಗಾಗಿ ಎಂ.ಲಕ್ಷ್ಮಣ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.
ಎಂ.ಲಕ್ಷ್ಮಣ್ ಅವರ ಹೇಳಿಕೆ ಏನು?
ಉದಯಗಿರಿ ಪೊಲೀಸ್ ಠಾಣೆ ಮೇಲೆ ಆರ್ಎಸ್ಎಸ್ ಕಾರ್ಯಕರ್ತರು ವೇಷಧರಿಸಿ ಕಲ್ಲೆಸೆದಿದ್ದಾರೆ. ಈ ಪ್ರಕರಣದಲ್ಲಿ 50ಕ್ಕೂ ಅಧಿಕ ಆರ್ಎಸ್ಎಸ್ ಕಾರ್ಯಕರ್ತರು ಗುಂಪಿನೊಂದಿಗೆ ಸೇರಿ ದಾಂಧಲೆ ನಡೆಸಿದ್ದಾರೆ. ಅವರ ಹುನ್ನಾರದಿಂದಲೇ ಪೊಲೀಸ್ ಠಾಣೆಯ ಮೇಲೆ ಗಲಭೆಯಾಗಿದೆ ಎಂದು ಹೇಳಿಕೆ ನೀಡಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…