ಮಂಡ್ಯ

ನನಸಾಗದ ಐಎಎಸ್ ಕನಸು : ಮನನೊಂದ ಕಾವೇರಿ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

ಮಂಡ್ಯ : ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯ ನಗರದ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡವರು.

ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದು, ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.
ಕೊಳ್ಳೇಗಾಲದ ಮಲ್ಲಪ್ಪರ ಪುತ್ರಿಯಾದ ಶೃತಿ, ಕಾವೇರಿ ಗ್ರಾಮೀಣ ಬ್ಯಾಂಕ್‌ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು.

ವಿನಾಯಕ ಬಡಾವಣೆಯ ರಾಜಣ್ಣ ಎಂಬವರ ಮನೆಯನ್ನು ಬಾಡಿಗೆಗೆ ಪಡೆದು ಅವಿವಾಹಿತರಾಗಿದ್ದ ಹಿನ್ನೆಲೆಯಲ್ಲಿ ಒಬ್ಬರೇ ವಾಸವಾಗಿದ್ದರು.
ಭಾನುವಾರ ರಾತ್ರಿ 7ರ ಸಮಯದಲ್ಲಿ ತಂದೆ ಮಲ್ಲಪ್ಪ ಅವರಿಗೆ ಕರೆ ಮಾಡಿದ ಶೃತಿ, ನಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ಹೇಳಿ ಕರೆ ಕಡಿತ ಮಾಡಿದ್ದಾರೆ. ತಕ್ಷಣ ಮತ್ತೆ ಅವರು ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಮಂಡ್ಯದಲ್ಲಿರುವ ಸಂಬಂಧಿಕರಿಗೆ ಮಲ್ಲಪ್ಪ ವಿಚಾರ ತಿಳಿಸಿದ್ದು. ಮನೆಯ ಬಳಿ ಹೋಗಿ ನೋಡಿದಾಗ ಅಷ್ಟರಲ್ಲಿ ನೇಣು ಬಿಗಿದುಕೊಂಡಿದ್ದರು.
ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿರುವ ಶೃತಿ ಐಎಎಸ್ ಮಾಡಬೇಕೆಂಬ ಕನಸು ನನಸಾಗಲಿಲ್ಲ, ಜತೆಗೆ ಜೀವನದಲ್ಲಿಯೂ ನಾನು ವೈಫಲ್ಯವನ್ನೂ ಕಂಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

lokesh

Recent Posts

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

27 mins ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

2 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

3 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

3 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

4 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

4 hours ago