ಮಂಡ್ಯ : ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯ ನಗರದ ಕಾವೇರಿ ಗ್ರಾಮೀಣ ಬ್ಯಾಂಕ್ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡವರು.
ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದು, ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.
ಕೊಳ್ಳೇಗಾಲದ ಮಲ್ಲಪ್ಪರ ಪುತ್ರಿಯಾದ ಶೃತಿ, ಕಾವೇರಿ ಗ್ರಾಮೀಣ ಬ್ಯಾಂಕ್ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು.
ವಿನಾಯಕ ಬಡಾವಣೆಯ ರಾಜಣ್ಣ ಎಂಬವರ ಮನೆಯನ್ನು ಬಾಡಿಗೆಗೆ ಪಡೆದು ಅವಿವಾಹಿತರಾಗಿದ್ದ ಹಿನ್ನೆಲೆಯಲ್ಲಿ ಒಬ್ಬರೇ ವಾಸವಾಗಿದ್ದರು.
ಭಾನುವಾರ ರಾತ್ರಿ 7ರ ಸಮಯದಲ್ಲಿ ತಂದೆ ಮಲ್ಲಪ್ಪ ಅವರಿಗೆ ಕರೆ ಮಾಡಿದ ಶೃತಿ, ನಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ಹೇಳಿ ಕರೆ ಕಡಿತ ಮಾಡಿದ್ದಾರೆ. ತಕ್ಷಣ ಮತ್ತೆ ಅವರು ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು.
ಮಂಡ್ಯದಲ್ಲಿರುವ ಸಂಬಂಧಿಕರಿಗೆ ಮಲ್ಲಪ್ಪ ವಿಚಾರ ತಿಳಿಸಿದ್ದು. ಮನೆಯ ಬಳಿ ಹೋಗಿ ನೋಡಿದಾಗ ಅಷ್ಟರಲ್ಲಿ ನೇಣು ಬಿಗಿದುಕೊಂಡಿದ್ದರು.
ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿರುವ ಶೃತಿ ಐಎಎಸ್ ಮಾಡಬೇಕೆಂಬ ಕನಸು ನನಸಾಗಲಿಲ್ಲ, ಜತೆಗೆ ಜೀವನದಲ್ಲಿಯೂ ನಾನು ವೈಫಲ್ಯವನ್ನೂ ಕಂಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…