ಮಂಡ್ಯ

ನನಸಾಗದ ಐಎಎಸ್ ಕನಸು : ಮನನೊಂದ ಕಾವೇರಿ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

ಮಂಡ್ಯ : ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡ ಕಾವೇರಿ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯ ನಗರದ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ ಶೃತಿ (30) ಆತ್ಮಹತ್ಯೆ ಮಾಡಿಕೊಂಡವರು.

ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದು, ಐಎಎಸ್ ಕನಸು ಮತ್ತು ಜೀವನದ ವೈಫಲ್ಯ ಸಾವಿಗೆ ಕಾರಣ ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.
ಕೊಳ್ಳೇಗಾಲದ ಮಲ್ಲಪ್ಪರ ಪುತ್ರಿಯಾದ ಶೃತಿ, ಕಾವೇರಿ ಗ್ರಾಮೀಣ ಬ್ಯಾಂಕ್‌ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆ ಬಂದಿದ್ದರು.

ವಿನಾಯಕ ಬಡಾವಣೆಯ ರಾಜಣ್ಣ ಎಂಬವರ ಮನೆಯನ್ನು ಬಾಡಿಗೆಗೆ ಪಡೆದು ಅವಿವಾಹಿತರಾಗಿದ್ದ ಹಿನ್ನೆಲೆಯಲ್ಲಿ ಒಬ್ಬರೇ ವಾಸವಾಗಿದ್ದರು.
ಭಾನುವಾರ ರಾತ್ರಿ 7ರ ಸಮಯದಲ್ಲಿ ತಂದೆ ಮಲ್ಲಪ್ಪ ಅವರಿಗೆ ಕರೆ ಮಾಡಿದ ಶೃತಿ, ನಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ಹೇಳಿ ಕರೆ ಕಡಿತ ಮಾಡಿದ್ದಾರೆ. ತಕ್ಷಣ ಮತ್ತೆ ಅವರು ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಮಂಡ್ಯದಲ್ಲಿರುವ ಸಂಬಂಧಿಕರಿಗೆ ಮಲ್ಲಪ್ಪ ವಿಚಾರ ತಿಳಿಸಿದ್ದು. ಮನೆಯ ಬಳಿ ಹೋಗಿ ನೋಡಿದಾಗ ಅಷ್ಟರಲ್ಲಿ ನೇಣು ಬಿಗಿದುಕೊಂಡಿದ್ದರು.
ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿರುವ ಶೃತಿ ಐಎಎಸ್ ಮಾಡಬೇಕೆಂಬ ಕನಸು ನನಸಾಗಲಿಲ್ಲ, ಜತೆಗೆ ಜೀವನದಲ್ಲಿಯೂ ನಾನು ವೈಫಲ್ಯವನ್ನೂ ಕಂಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

lokesh

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

29 mins ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

50 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

54 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

5 hours ago