ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಬೂದನೂರು ಗ್ರಾಮದ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ 8ರ ಸಮಯದಲ್ಲಿ ನಡೆದಿದೆ.
ಹೊಸ ಬೂದನೂರು ಗ್ರಾಮದ ಕೋಣೆ ಕೆಂಪಯ್ಯ ಅವರ ಮಗ ಸತೀಶ್ (38) ಹಾಗೂ ಮೂಡೆ ಪುಟ್ಟಲಿಂಗಯ್ಯ ಅವರ ಮಗ ಪ್ರದೀಪ್ (36) ಮೃತ ವ್ಯಕ್ತಿಗಳು. ತಮ್ಮ ಜಮೀನಿಗೆ ಹೋಗಿದ್ದ ಈ ಇಬ್ಬರು ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಪ್ರತಿಭಟನೆ: ಬೆಂಗಳೂರು ಮೈಸೂರು ಹೆದ್ದಾರಿ ಆದಾಗನಿಂದಲೂ ಈ ಮಾರ್ಗವಾಗಿ ಅಪಘಾತಗಳು ಹೆಚ್ಚುತ್ತಿದ್ದು, ಇದನ್ನು ತಡೆಯಬೇಕು. ಮೃತರ ಕುಟುಂಬಕ್ಕೆ ದಿಲೀಪ್ ಬಿಲ್ಡ್ ಕಾನ್ ಸಂಸ್ಥೆಯವರು ಪರಿಹಾರ ನೀಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಇದರಿಂದಾಗಿ ಬೆಂಗಳೂರು ಮೈಸೂರು ಹೆದ್ದಾರಿಯ ಉದ್ದಕ್ಕೂ ವಾಹನಗಳು ನಿಂತ ಹಿನ್ನೆಲೆಯಲ್ಲಿ ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತವಾಯಿತು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…