ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ.
ಈ ಮೊದಲು ನೀಡಿದ್ದ ಭರವಸೆಯಂತೆ ಇಂದು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಇಂದು 19,94,200 ಮೊತ್ತದ ಚೆಕ್ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೇ ಕೆಲಸ ಮಾಡುವುದು ಕಷ್ಟ. ನಿಮ್ಮ ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.
ಇದು ಐತಿಹಾಸಿಕ ಶಾಲೆ, ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುಕುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂಬರ್.1 ಆಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಹೇಳಿದರು.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…