ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ.
ಈ ಮೊದಲು ನೀಡಿದ್ದ ಭರವಸೆಯಂತೆ ಇಂದು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಇಂದು 19,94,200 ಮೊತ್ತದ ಚೆಕ್ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು. ಇದಕ್ಕೆ ಸ್ಪಂದಿಸಿದ ಸಚಿವರು, ವೇತನವಿಲ್ಲದೇ ಕೆಲಸ ಮಾಡುವುದು ಕಷ್ಟ. ನಿಮ್ಮ ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.
ಇದು ಐತಿಹಾಸಿಕ ಶಾಲೆ, ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುಕುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂಬರ್.1 ಆಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಹೇಳಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…