ಮಂಡ್ಯ

ಅನಧಿಕೃತವಾಗಿ ಟ್ಯೂಶನ್ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಡಿಪಿಐ ಎಚ್ಚರಿಕೆ

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಶನ್ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಶಿಕ್ಷಕನೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ  ಬೆನ್ನಲ್ಲೇ ಎಚ್ಚೆತ್ತುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ಇರುವ ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಮುಚ್ಚಲು ಆದೇಶ ನೀಡಿದೆ.

ಮಂಡ್ಯ ಡಿಡಿಪಿಐ ಜವರೇಗೌಡರು ಈ ಬಗ್ಗೆ ಎಲ್ಲಾ ತಾಲ್ಲೂಕು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಬಂದ್ ಮಾಡಬೇಕು, ಸರಕಾರಿ, ಅನುದಾನ, ಅನುದಾನ ರಹಿತ ಶಿಕ್ಷಕರು ಅನುಮತಿಯಿಲ್ಲದೇ ಟ್ಯೂಶನ್ ಮಾಡುತ್ತಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ಅನುಮತಿ ಪಡೆಯದೇ ಟ್ಯೂಶನ್ ನಡೆಸುತ್ತಿದ್ದರೆ ಅಂತಹ ಸೆಂಟರ್‌ಗಳನ್ನು ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಡಿಡಿಪಿಐ ತಿಳಿಸಿದ್ದಾರೆ. ಇನ್ನು ಬಿ ಇ ಒ ನೀಡಿದ ವರದಿ ಆಧರಿಸಿ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಟ್ಯೂಶನ್ ಸೆಂಟರ್‌ ಅನ್ನು ರದ್ದು ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಟ್ಯೂಶನ್ ಸೆಂಟರ್‌ಗಳನ್ನು ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಅಧಿಕೃತ ಟ್ಯೂಶನ್ ಮಾಡಬೇಕೆಂದರೆ, ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾಯ್ದೆಯ ಪ್ರಕಾರ 5 ಸಾವಿರ ಠೇವಣಿ ಕಟ್ಟಿ ನೋಂದಣಿ ಮಾಡಿಕೊಳ್ಳಬೇಕು. 1 ಲಕ್ಷ ಭದ್ರತಾ ಠೇವಣಿಯನ್ನು ಇಟ್ಟಿರಬೇಕು. ಇದರ ಜೊತೆಗೆ ಟ್ಯೂಶನ್‌ ಮಾಡುವ ಸ್ಥಳದಲ್ಲಿ ಎಲ್ಲಾ ಮೂಲಭೂತ ಸೌಲಭ್ಯ, ಸಿಸಿ ಟಿವಿ ಕ್ಯಾಮೆರಾ, ಗಾಳಿ-ಬೆಳಕು ಇರುವ ಕಟ್ಟಡ, ಅರ್ಹ ಶಿಕ್ಷಕರ ಹಾಗೂ ಅವರು ಪಾಠ ಮಾಡುವ  ಸಂಪೂರ್ಣ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿ ಅನುಮತಿ ಮಾಡಬೇಕೆಂದು ಡಿ ಡಿ ಪಿ ಐ ಮಾಹಿತಿ ನೀಡಿದರು.

andolana

Recent Posts

ಬೌದ್ಧ ಧರ್ಮಗುರು ದಲೈಲಾಮಾಗೆ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಗೌರವ

ಟಿಬೆಟ್‌ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ…

55 mins ago

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

57 mins ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

2 hours ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

2 hours ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

2 hours ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago