ಮಂಡ್ಯ

ಅನಧಿಕೃತವಾಗಿ ಟ್ಯೂಶನ್ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಡಿಡಿಪಿಐ ಎಚ್ಚರಿಕೆ

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಶನ್ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಶಿಕ್ಷಕನೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ  ಬೆನ್ನಲ್ಲೇ ಎಚ್ಚೆತ್ತುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ಇರುವ ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಮುಚ್ಚಲು ಆದೇಶ ನೀಡಿದೆ.

ಮಂಡ್ಯ ಡಿಡಿಪಿಐ ಜವರೇಗೌಡರು ಈ ಬಗ್ಗೆ ಎಲ್ಲಾ ತಾಲ್ಲೂಕು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ಬಂದ್ ಮಾಡಬೇಕು, ಸರಕಾರಿ, ಅನುದಾನ, ಅನುದಾನ ರಹಿತ ಶಿಕ್ಷಕರು ಅನುಮತಿಯಿಲ್ಲದೇ ಟ್ಯೂಶನ್ ಮಾಡುತ್ತಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ಅನುಮತಿ ಪಡೆಯದೇ ಟ್ಯೂಶನ್ ನಡೆಸುತ್ತಿದ್ದರೆ ಅಂತಹ ಸೆಂಟರ್‌ಗಳನ್ನು ನಡೆಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಡಿಡಿಪಿಐ ತಿಳಿಸಿದ್ದಾರೆ. ಇನ್ನು ಬಿ ಇ ಒ ನೀಡಿದ ವರದಿ ಆಧರಿಸಿ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಟ್ಯೂಶನ್ ಸೆಂಟರ್‌ ಅನ್ನು ರದ್ದು ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಟ್ಯೂಶನ್ ಸೆಂಟರ್‌ಗಳನ್ನು ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಅಧಿಕೃತ ಟ್ಯೂಶನ್ ಮಾಡಬೇಕೆಂದರೆ, ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾಯ್ದೆಯ ಪ್ರಕಾರ 5 ಸಾವಿರ ಠೇವಣಿ ಕಟ್ಟಿ ನೋಂದಣಿ ಮಾಡಿಕೊಳ್ಳಬೇಕು. 1 ಲಕ್ಷ ಭದ್ರತಾ ಠೇವಣಿಯನ್ನು ಇಟ್ಟಿರಬೇಕು. ಇದರ ಜೊತೆಗೆ ಟ್ಯೂಶನ್‌ ಮಾಡುವ ಸ್ಥಳದಲ್ಲಿ ಎಲ್ಲಾ ಮೂಲಭೂತ ಸೌಲಭ್ಯ, ಸಿಸಿ ಟಿವಿ ಕ್ಯಾಮೆರಾ, ಗಾಳಿ-ಬೆಳಕು ಇರುವ ಕಟ್ಟಡ, ಅರ್ಹ ಶಿಕ್ಷಕರ ಹಾಗೂ ಅವರು ಪಾಠ ಮಾಡುವ  ಸಂಪೂರ್ಣ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿ ಅನುಮತಿ ಮಾಡಬೇಕೆಂದು ಡಿ ಡಿ ಪಿ ಐ ಮಾಹಿತಿ ನೀಡಿದರು.

andolana

Recent Posts

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

2 mins ago

ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು…

6 mins ago

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

3 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

4 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

5 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

6 hours ago